ಕ್ರೀಡೆ

ಟೀಂ ಇಂಡಿಯಾ ಯಾಕೆ ಐಸಿಸಿ ಟ್ರೋಫಿ ಗೆಲ್ಲುತ್ತಿಲ್ಲ: ಕಾರಣ ಹೇಳಿದ ಗಂಗೂಲಿ

ಮುಂಬೈ: ಟೀಂ ಇಂಡಿಯಾ ತಂಡವು 2013ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ತಲುಪಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾದ ಟ್ರೋಫಿ ಬರದ ಬಗ್ಗೆ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭಾರತದ ವೈಫಲ್ಯಗಳಿಗೆ ಮಾನಸಿಕ ಒತ್ತಡಕ್ಕಿಂತ ಹೆಚ್ಚಾಗಿ ಯೋಜನೆಯ ಕಾರ್ಯಗತಗೊಳಿಸುವಲ್ಲಿನ ಕೊರತೆಯೇ ಕಾರಣ ಎಂದು ಗಂಗೂಲಿ ಹೇಳಿದ್ದಾರೆ.

“ನಾವು ನಿರ್ಣಾಯಕ ಹಂತಗಳಲ್ಲಿ ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಎಂದು ನಾನು ಭಾವಿಸುವುದಿಲ್ಲ, ಆದರೆ ಕಾರ್ಯಗತ ಮಾಡುವುದಕ್ಕೆ ಸಂಬಂಧಿಸಿದೆ. ಅವರು ಮಾನಸಿಕವಾಗಿ ಬಲವಾದ ಜನರು. ಆಶಾದಾಯಕವಾಗಿ, ಅವರು ಶೀಘ್ರದಲ್ಲೇ ಆ ಗೆರೆಯನ್ನು ದಾಟುತ್ತಾರೆ” ಎಂದು ಗಂಗೂಲಿ ಹೇಳಿದರು

ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಈ ಬಾರಿಯೂ ತಂಡವನ್ನು ಗಡಿ ದಾಟಿಸುವ ಭರವಸೆಯನ್ನು ಗಂಗೂಲಿ ವ್ಯಕ್ತಪಡಿಸಿದ್ದಾರೆ.

ಹೌದು, ಯಾವಾಗಲೂ ಭರವಸೆಯಿದೆ. ಡಬ್ಲ್ಯೂಟಿಸಿ ಯ ಫೈನಲ್‌ಗೆ ನಾವು ಅರ್ಹತೆ ಪಡೆದಿದ್ದೇವೆ, ಅದು ಸಹ ಸಾಧನೆಯಾಗಿದೆ. ನಮಗೆ ವಿಶ್ವಕಪ್ ನಲ್ಲಿ ಅವಕಾಶವಿದೆ. ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ, ಆಶಾದಾಯಕವಾಗಿ, ಈ ಬಾರಿ ವಿಶ್ವಕಪ್ ಗೆಲ್ಲುತ್ತೇವೆ” ಅವರು ಸೇರಿಸಿದರು.

2023ರ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ಆತಿಥ್ಯ ವಹಿಸಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕೂಟವು ಭಾರತದ ಹತ್ತು ನಗರಗಳಲ್ಲಿ ನಡೆಯಲಿದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago