ಕ್ರೀಡೆ

ಮಹಿಳಾ ಕ್ರಿಕೆಟಿಗರಿಗೆ ಪುರುಷರ ಟೀಂನಷ್ಟೇ ಸಂಭಾವನೆ ನೀಡಲಿದೆಯೇ ಬಿಸಿಸಿಐ?

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್‌ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

 

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

23 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

37 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago