ಕ್ರೀಡೆ

ಮಹಿಳಾ ಕ್ರಿಕೆಟಿಗರಿಗೆ ಪುರುಷರ ಟೀಂನಷ್ಟೇ ಸಂಭಾವನೆ ನೀಡಲಿದೆಯೇ ಬಿಸಿಸಿಐ?

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್‌ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

 

andolana

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

3 hours ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

3 hours ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

3 hours ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

3 hours ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

3 hours ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

3 hours ago