ಕ್ರೀಡೆ

ಮಹಿಳಾ ಕ್ರಿಕೆಟಿಗರಿಗೆ ಪುರುಷರ ಟೀಂನಷ್ಟೇ ಸಂಭಾವನೆ ನೀಡಲಿದೆಯೇ ಬಿಸಿಸಿಐ?

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್‌ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

 

andolana

Recent Posts

ಸಾಮಾಜಿಕ ಬಹಿಷ್ಕಾರಕ್ಕೆ ಕಾನೂನಿನ ಅಂಕುಶ : ಇಂದಿನಿಂದ ಹೊಸ ನಿಯಮ ಜಾರಿಗೆ

ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…

8 hours ago

ನಾಳೆ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿಎಂ, ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…

9 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ಮುಖ್ಯ ಶಿಕ್ಷಕರು ಸೇರಿ 8 ಮಂದಿ ಬಂಧನ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…

10 hours ago

ಹುಲಿ ದಾಳಿ ; ಹಸು ಸಾವು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…

10 hours ago

ಜ.15ರಿಂದ ಐತಿಹಾಸಿಕ ಸುತ್ತೂರು ಜಾತ್ರೆ : 25 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…

10 hours ago

ರೈತನ ಮಗಳ ಸಾಧನೆ | ಮೈಸೂರು ವಿ.ವಿ ವ್ಯಾಪ್ತಿಯ ಬಿ.ಇಡಿ ಕಾಲೇಜಿಗೆ ಮೊದಲ ರ‍್ಯಾಂಕ್‌, ಚಿನ್ನದ ಪದಕ

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…

10 hours ago