ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.
ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.
ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…