ಕ್ರೀಡೆ

ಮಹಿಳಾ ಕ್ರಿಕೆಟಿಗರಿಗೆ ಪುರುಷರ ಟೀಂನಷ್ಟೇ ಸಂಭಾವನೆ ನೀಡಲಿದೆಯೇ ಬಿಸಿಸಿಐ?

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್‌ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್‌ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್‌ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

 

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

36 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

6 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago