ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ(ಅ.27) ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಪುರುಷರ ಕ್ರಿಕೆಟಿಗರು ಪಡೆದಷ್ಟೇ ಸಂಭಾವನೆಯನ್ನು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಡೆಯಲಿದ್ದಾರೆ. ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಪುರುಷ ಹಾಗೂ ಮಹಿಳಾ ಆಟಗಾರ್ತಿಯರಿಗೆ ಸಮಾನ ಪಂದ್ಯದ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಭಾರತ ಪುರುಷ ತಂಡದ ಆಟಗಾರರು ಪಡೆದಷ್ಟೇ ಮಹಿಳಾ ಆಟಗಾರರು ಪ್ರತಿ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರುಪಾಯಿ, ಪ್ರತಿ ಏಕದಿನ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗೂ ಪ್ರತಿ ಟಿ20 ಪಂದ್ಯಕ್ಕೆ ತಲಾ 3 ಲಕ್ಷ ರುಪಾಯಿಗಳನ್ನು ಪಡೆಯಲಿದ್ದಾರೆ. ಬಿಸಿಸಿಐ ಜಯ್ ಶಾ ಸರಣಿ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 7ನೇ ಬಾರಿಗೆ ಏಷ್ಯಾಕಪ್ ಟೂರ್ನಿಯನ್ನು ಗೆದ್ದು ಬೀಗಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.
ಲಿಂಗ ತಾರತಮ್ಯಕ್ಕೆ ಕಡಿವಾಣಹಾಕಲು ಬಿಸಿಸಿಐ ಮೊದಲ ಹೆಜ್ಜೆಯಿಟ್ಟಿರುವುದನ್ನು ತಿಳಿಸಲು ನಾವು ಹರ್ಷಿತರಾಗಿದ್ದೇವೆ. ನಾವೀಗ ಮಹಿಳಾ ಕ್ರಿಕೆಟಿಗರಿಗರಿಗೂ ಸಮಾನ ವೇತನ ನೀಡಲು ತೀರ್ಮಾನಿಸಿದ್ದೇವೆ. ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ಸಂಭಾವನೆಯು ಸಮಾನವಾಗಿರಲಿದೆ. ನಾವೂ ಹೊಸ ತಲೆಮಾರಿನಲ್ಲಿ ಭಾರತ ಕ್ರಿಕೆಟ್ನಲ್ಲಿ ಲಿಂಗ ಸಮಾನತೆ ಸಾಧಿಸಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.
ಬಿಸಿಸಿಐನ ಮಹಿಳಾ ಕ್ರಿಕೆಟಿಗರು, ಇದೀಗ ಭಾರತ ಪುರುಷ ಕ್ರಿಕೆಟಿಗರು ಪಡೆಯವಷ್ಟು ಪಂದ್ಯದ ಸಂಭಾವನೆಯನ್ನು ಪಡೆಯಲಿದ್ದಾರೆ. ಟೆಸ್ಟ್ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಏಕದಿನ ಕ್ರಿಕೆಟ್ಗೆ 6 ಲಕ್ಷ ರುಪಾಯಿ ಹಾಗೂ ಟಿ20 ಪಂದ್ಯವೊಂದಕ್ಕೆ 3 ಲಕ್ಷ ರುಪಾಯಿ ಪಡೆಯಲಿದ್ದಾರೆ. ಮಹಿಳಾ ಕ್ರಿಕೆಟಿಗರಿಗೆ ವೇತನ ಸಮಾನತೆ ನನ್ನ ಬದ್ದತೆಯಾಗಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು, ಜಯ್ ಹಿಂದ್ ಎಂದು ಜಯ್ ಶಾ ಟ್ವೀಟ್ ಮಾಡಿ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…