ಕ್ರೀಡೆ

23 ವರ್ಷ ಬಳಿಕ ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಗೆಲುವು

ಕ್ಯಾಂಟರ್ಬರಿ(ಇಂಗ್ಲೆಂಡ್​): ಆಂಗ್ಲರ ನಾಡಲ್ಲಿ ಹರ್ಮನ್​ಪ್ರೀತ್​ ಕೌರ್​ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್​​​ಗಳ ಭರ್ಜರಿ ಗೆಲುವಿನೊಂದಿಗೆ 23 ವರ್ಷಗಳ ಬಳಿಕ ಇಂಗ್ಲೆಂಡ್​ ವಿರುದ್ಧ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ತೋರಿದರು. 

ಇಂಗ್ಲೆಂಡ್​ನ ದಿ ಸ್ಟಿಟ್​ಫೈರ್​​ ಗ್ರೌಂಡ್​ ಸೇಂಟ್​​ ಲಾರೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಟೀಂ ಇಂಡಿಯಾ ನಿಗದಿತ 50 ಓವರ್​​​​​ಗಳಲ್ಲಿ 5 ವಿಕೆಟ್ ​ನಷ್ಟಕ್ಕೆ 333 ರನ್‌ಗಳ ಬೃಹತ್‌ ಗುರಿ ನೀಡಿತು. ಇನ್ನಿಂಗ್ಸ್‌ ಶುರು ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದ್ರೆ, ನಂತರ ಕ್ರೀಸ್‌ನಲ್ಲಿ ಜತೆಯಾದ ನಾಯಕಿ ಹರ್ಮನ್​ಪ್ರೀತ್​ ಕೌರ್​​ ಅಬ್ಬರದ ಆಟಕ್ಕೆ ಮಂದಾದರು. ಮೈದಾನದ ಉದ್ದಗಲ ಲೀಲಾಜಾಲವಾಗಿ ಬ್ಯಾಟ್‌ ಬೀಸಿದ ಅವರು 143 ರನ್ ಗಳಿಸಿದರೆ, ಹರ್ಲಿನ್ ಡಿಯೋಲ್​​ ​(58) ರನ್​​ ಸೇರಿಸಿ ತಂಡ 300 ರನ್‌ ಗಡಿ ದಾಟುವಂತೆ ಮಾಡಿದರು. ಕೌರ್ ಅಬ್ಬರದ ಆಟದಲ್ಲಿ 18 ಬೌಂಡರಿ, 4 ಸಿಕ್ಸರ್​ ಸೇರಿದ್ದವು. ಇನ್ನು, ಸ್ಮೃತಿ ಮಂದಾನ (40) ರನ್ ಪೇರಿಸಿದರು.

334 ರನ್​​ಗಳ ಸವಾಲಿನ ಟಾರ್ಗೆಟ್‌ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡ ಕೇವಲ 12 ರನ್​​​​ ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಯಾಪ್ಸೆ (39), ಡೇನಿಲ್ ​​​(65), ಜಾನ್ಸಿ (39) ರನ್​​​ಗಳಿಸಿ ತಂಡವನ್ನು ಗೆಲುವಿನ ದಡದತ್ತ ತೆಗೆದುಕೊಂಡು ಹೋಗುವ ಮುನ್ಸೂಚನೆ ನೀಡಿದರು. ಆದರೆ, ಇವರ ವಿಕೆಟ್ ಕೀಳುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಮಹಿಳೆಯರು ಮೇಲುಗೈ ಸಾಧಿಸಿದರು. ಕೊನೆಯದಾಗಿ, ತಂಡ 44.2 ಓವರ್​​​​​ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 245 ರನ್​​ಗಳಿಸಲು ಮಾತ್ರ ಸಾಧ್ಯವಾಯಿತು. ಹೀಗಾಗಿ, ಆಂಗ್ಲ ಮಹಿಳೆಯರು 88 ರನ್​​​ಗಳ ದೊಡ್ಡ ಅಂತರದ ಸೋಲು ಕಂಡರು.

ಬೌಲರ್ ರೇಣುಕಾ ಸಿಂಗ್​ 4 ವಿಕೆಟ್​​ ಪಡೆದರೆ, ಹೇಮಲತಾ 2, ಶೆಫಾಲಿ ಹಾಗೂ ದೀಪ್ತಿ ಶರ್ಮಾ 1 ವಿಕೆಟ್ ಉರುಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿಯೂ ಭಾರತೀಯರು ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದ್ದಾರೆ.

 

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

1 hour ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

2 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

2 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

2 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

3 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

3 hours ago