ಕ್ಯಾಂಟರ್ಬರಿ(ಇಂಗ್ಲೆಂಡ್): ಆಂಗ್ಲರ ನಾಡಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್ಗಳ ಭರ್ಜರಿ ಗೆಲುವಿನೊಂದಿಗೆ 23 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ತೋರಿದರು.
ಇಂಗ್ಲೆಂಡ್ನ ದಿ ಸ್ಟಿಟ್ಫೈರ್ ಗ್ರೌಂಡ್ ಸೇಂಟ್ ಲಾರೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 333 ರನ್ಗಳ ಬೃಹತ್ ಗುರಿ ನೀಡಿತು. ಇನ್ನಿಂಗ್ಸ್ ಶುರು ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದ್ರೆ, ನಂತರ ಕ್ರೀಸ್ನಲ್ಲಿ ಜತೆಯಾದ ನಾಯಕಿ ಹರ್ಮನ್ಪ್ರೀತ್ ಕೌರ್ ಅಬ್ಬರದ ಆಟಕ್ಕೆ ಮಂದಾದರು. ಮೈದಾನದ ಉದ್ದಗಲ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಅವರು 143 ರನ್ ಗಳಿಸಿದರೆ, ಹರ್ಲಿನ್ ಡಿಯೋಲ್ (58) ರನ್ ಸೇರಿಸಿ ತಂಡ 300 ರನ್ ಗಡಿ ದಾಟುವಂತೆ ಮಾಡಿದರು. ಕೌರ್ ಅಬ್ಬರದ ಆಟದಲ್ಲಿ 18 ಬೌಂಡರಿ, 4 ಸಿಕ್ಸರ್ ಸೇರಿದ್ದವು. ಇನ್ನು, ಸ್ಮೃತಿ ಮಂದಾನ (40) ರನ್ ಪೇರಿಸಿದರು.
334 ರನ್ಗಳ ಸವಾಲಿನ ಟಾರ್ಗೆಟ್ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡ ಕೇವಲ 12 ರನ್ ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಯಾಪ್ಸೆ (39), ಡೇನಿಲ್ (65), ಜಾನ್ಸಿ (39) ರನ್ಗಳಿಸಿ ತಂಡವನ್ನು ಗೆಲುವಿನ ದಡದತ್ತ ತೆಗೆದುಕೊಂಡು ಹೋಗುವ ಮುನ್ಸೂಚನೆ ನೀಡಿದರು. ಆದರೆ, ಇವರ ವಿಕೆಟ್ ಕೀಳುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಮಹಿಳೆಯರು ಮೇಲುಗೈ ಸಾಧಿಸಿದರು. ಕೊನೆಯದಾಗಿ, ತಂಡ 44.2 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡು 245 ರನ್ಗಳಿಸಲು ಮಾತ್ರ ಸಾಧ್ಯವಾಯಿತು. ಹೀಗಾಗಿ, ಆಂಗ್ಲ ಮಹಿಳೆಯರು 88 ರನ್ಗಳ ದೊಡ್ಡ ಅಂತರದ ಸೋಲು ಕಂಡರು.
ಬೌಲರ್ ರೇಣುಕಾ ಸಿಂಗ್ 4 ವಿಕೆಟ್ ಪಡೆದರೆ, ಹೇಮಲತಾ 2, ಶೆಫಾಲಿ ಹಾಗೂ ದೀಪ್ತಿ ಶರ್ಮಾ 1 ವಿಕೆಟ್ ಉರುಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿಯೂ ಭಾರತೀಯರು ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…