ಕ್ರೀಡೆ

23 ವರ್ಷ ಬಳಿಕ ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಗೆಲುವು

ಕ್ಯಾಂಟರ್ಬರಿ(ಇಂಗ್ಲೆಂಡ್​): ಆಂಗ್ಲರ ನಾಡಲ್ಲಿ ಹರ್ಮನ್​ಪ್ರೀತ್​ ಕೌರ್​ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್​​​ಗಳ ಭರ್ಜರಿ ಗೆಲುವಿನೊಂದಿಗೆ 23 ವರ್ಷಗಳ ಬಳಿಕ ಇಂಗ್ಲೆಂಡ್​ ವಿರುದ್ಧ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ತೋರಿದರು. 

ಇಂಗ್ಲೆಂಡ್​ನ ದಿ ಸ್ಟಿಟ್​ಫೈರ್​​ ಗ್ರೌಂಡ್​ ಸೇಂಟ್​​ ಲಾರೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಟೀಂ ಇಂಡಿಯಾ ನಿಗದಿತ 50 ಓವರ್​​​​​ಗಳಲ್ಲಿ 5 ವಿಕೆಟ್ ​ನಷ್ಟಕ್ಕೆ 333 ರನ್‌ಗಳ ಬೃಹತ್‌ ಗುರಿ ನೀಡಿತು. ಇನ್ನಿಂಗ್ಸ್‌ ಶುರು ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದ್ರೆ, ನಂತರ ಕ್ರೀಸ್‌ನಲ್ಲಿ ಜತೆಯಾದ ನಾಯಕಿ ಹರ್ಮನ್​ಪ್ರೀತ್​ ಕೌರ್​​ ಅಬ್ಬರದ ಆಟಕ್ಕೆ ಮಂದಾದರು. ಮೈದಾನದ ಉದ್ದಗಲ ಲೀಲಾಜಾಲವಾಗಿ ಬ್ಯಾಟ್‌ ಬೀಸಿದ ಅವರು 143 ರನ್ ಗಳಿಸಿದರೆ, ಹರ್ಲಿನ್ ಡಿಯೋಲ್​​ ​(58) ರನ್​​ ಸೇರಿಸಿ ತಂಡ 300 ರನ್‌ ಗಡಿ ದಾಟುವಂತೆ ಮಾಡಿದರು. ಕೌರ್ ಅಬ್ಬರದ ಆಟದಲ್ಲಿ 18 ಬೌಂಡರಿ, 4 ಸಿಕ್ಸರ್​ ಸೇರಿದ್ದವು. ಇನ್ನು, ಸ್ಮೃತಿ ಮಂದಾನ (40) ರನ್ ಪೇರಿಸಿದರು.

334 ರನ್​​ಗಳ ಸವಾಲಿನ ಟಾರ್ಗೆಟ್‌ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡ ಕೇವಲ 12 ರನ್​​​​ ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಯಾಪ್ಸೆ (39), ಡೇನಿಲ್ ​​​(65), ಜಾನ್ಸಿ (39) ರನ್​​​ಗಳಿಸಿ ತಂಡವನ್ನು ಗೆಲುವಿನ ದಡದತ್ತ ತೆಗೆದುಕೊಂಡು ಹೋಗುವ ಮುನ್ಸೂಚನೆ ನೀಡಿದರು. ಆದರೆ, ಇವರ ವಿಕೆಟ್ ಕೀಳುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಮಹಿಳೆಯರು ಮೇಲುಗೈ ಸಾಧಿಸಿದರು. ಕೊನೆಯದಾಗಿ, ತಂಡ 44.2 ಓವರ್​​​​​ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 245 ರನ್​​ಗಳಿಸಲು ಮಾತ್ರ ಸಾಧ್ಯವಾಯಿತು. ಹೀಗಾಗಿ, ಆಂಗ್ಲ ಮಹಿಳೆಯರು 88 ರನ್​​​ಗಳ ದೊಡ್ಡ ಅಂತರದ ಸೋಲು ಕಂಡರು.

ಬೌಲರ್ ರೇಣುಕಾ ಸಿಂಗ್​ 4 ವಿಕೆಟ್​​ ಪಡೆದರೆ, ಹೇಮಲತಾ 2, ಶೆಫಾಲಿ ಹಾಗೂ ದೀಪ್ತಿ ಶರ್ಮಾ 1 ವಿಕೆಟ್ ಉರುಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿಯೂ ಭಾರತೀಯರು ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದ್ದಾರೆ.

 

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago