ಕ್ರೀಡೆ

23 ವರ್ಷ ಬಳಿಕ ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಗೆಲುವು

ಕ್ಯಾಂಟರ್ಬರಿ(ಇಂಗ್ಲೆಂಡ್​): ಆಂಗ್ಲರ ನಾಡಲ್ಲಿ ಹರ್ಮನ್​ಪ್ರೀತ್​ ಕೌರ್​ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್​​​ಗಳ ಭರ್ಜರಿ ಗೆಲುವಿನೊಂದಿಗೆ 23 ವರ್ಷಗಳ ಬಳಿಕ ಇಂಗ್ಲೆಂಡ್​ ವಿರುದ್ಧ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ತೋರಿದರು. 

ಇಂಗ್ಲೆಂಡ್​ನ ದಿ ಸ್ಟಿಟ್​ಫೈರ್​​ ಗ್ರೌಂಡ್​ ಸೇಂಟ್​​ ಲಾರೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಟೀಂ ಇಂಡಿಯಾ ನಿಗದಿತ 50 ಓವರ್​​​​​ಗಳಲ್ಲಿ 5 ವಿಕೆಟ್ ​ನಷ್ಟಕ್ಕೆ 333 ರನ್‌ಗಳ ಬೃಹತ್‌ ಗುರಿ ನೀಡಿತು. ಇನ್ನಿಂಗ್ಸ್‌ ಶುರು ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದ್ರೆ, ನಂತರ ಕ್ರೀಸ್‌ನಲ್ಲಿ ಜತೆಯಾದ ನಾಯಕಿ ಹರ್ಮನ್​ಪ್ರೀತ್​ ಕೌರ್​​ ಅಬ್ಬರದ ಆಟಕ್ಕೆ ಮಂದಾದರು. ಮೈದಾನದ ಉದ್ದಗಲ ಲೀಲಾಜಾಲವಾಗಿ ಬ್ಯಾಟ್‌ ಬೀಸಿದ ಅವರು 143 ರನ್ ಗಳಿಸಿದರೆ, ಹರ್ಲಿನ್ ಡಿಯೋಲ್​​ ​(58) ರನ್​​ ಸೇರಿಸಿ ತಂಡ 300 ರನ್‌ ಗಡಿ ದಾಟುವಂತೆ ಮಾಡಿದರು. ಕೌರ್ ಅಬ್ಬರದ ಆಟದಲ್ಲಿ 18 ಬೌಂಡರಿ, 4 ಸಿಕ್ಸರ್​ ಸೇರಿದ್ದವು. ಇನ್ನು, ಸ್ಮೃತಿ ಮಂದಾನ (40) ರನ್ ಪೇರಿಸಿದರು.

334 ರನ್​​ಗಳ ಸವಾಲಿನ ಟಾರ್ಗೆಟ್‌ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡ ಕೇವಲ 12 ರನ್​​​​ ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಯಾಪ್ಸೆ (39), ಡೇನಿಲ್ ​​​(65), ಜಾನ್ಸಿ (39) ರನ್​​​ಗಳಿಸಿ ತಂಡವನ್ನು ಗೆಲುವಿನ ದಡದತ್ತ ತೆಗೆದುಕೊಂಡು ಹೋಗುವ ಮುನ್ಸೂಚನೆ ನೀಡಿದರು. ಆದರೆ, ಇವರ ವಿಕೆಟ್ ಕೀಳುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಮಹಿಳೆಯರು ಮೇಲುಗೈ ಸಾಧಿಸಿದರು. ಕೊನೆಯದಾಗಿ, ತಂಡ 44.2 ಓವರ್​​​​​ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 245 ರನ್​​ಗಳಿಸಲು ಮಾತ್ರ ಸಾಧ್ಯವಾಯಿತು. ಹೀಗಾಗಿ, ಆಂಗ್ಲ ಮಹಿಳೆಯರು 88 ರನ್​​​ಗಳ ದೊಡ್ಡ ಅಂತರದ ಸೋಲು ಕಂಡರು.

ಬೌಲರ್ ರೇಣುಕಾ ಸಿಂಗ್​ 4 ವಿಕೆಟ್​​ ಪಡೆದರೆ, ಹೇಮಲತಾ 2, ಶೆಫಾಲಿ ಹಾಗೂ ದೀಪ್ತಿ ಶರ್ಮಾ 1 ವಿಕೆಟ್ ಉರುಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿಯೂ ಭಾರತೀಯರು ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದ್ದಾರೆ.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago