ಕ್ರೀಡೆ

23 ವರ್ಷ ಬಳಿಕ ಇಂಗ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಗೆಲುವು

ಕ್ಯಾಂಟರ್ಬರಿ(ಇಂಗ್ಲೆಂಡ್​): ಆಂಗ್ಲರ ನಾಡಲ್ಲಿ ಹರ್ಮನ್​ಪ್ರೀತ್​ ಕೌರ್​ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ದಾಖಲೆ ನಿರ್ಮಿಸಿತು. ಬುಧವಾರ ನಡೆದ 2ನೇ ಏಕದಿನ ಪಂದ್ಯದಲ್ಲಿ 88 ರನ್​​​ಗಳ ಭರ್ಜರಿ ಗೆಲುವಿನೊಂದಿಗೆ 23 ವರ್ಷಗಳ ಬಳಿಕ ಇಂಗ್ಲೆಂಡ್​ ವಿರುದ್ಧ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ತೋರಿದರು. 

ಇಂಗ್ಲೆಂಡ್​ನ ದಿ ಸ್ಟಿಟ್​ಫೈರ್​​ ಗ್ರೌಂಡ್​ ಸೇಂಟ್​​ ಲಾರೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಟೀಂ ಇಂಡಿಯಾ ನಿಗದಿತ 50 ಓವರ್​​​​​ಗಳಲ್ಲಿ 5 ವಿಕೆಟ್ ​ನಷ್ಟಕ್ಕೆ 333 ರನ್‌ಗಳ ಬೃಹತ್‌ ಗುರಿ ನೀಡಿತು. ಇನ್ನಿಂಗ್ಸ್‌ ಶುರು ಮಾಡಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಆದ್ರೆ, ನಂತರ ಕ್ರೀಸ್‌ನಲ್ಲಿ ಜತೆಯಾದ ನಾಯಕಿ ಹರ್ಮನ್​ಪ್ರೀತ್​ ಕೌರ್​​ ಅಬ್ಬರದ ಆಟಕ್ಕೆ ಮಂದಾದರು. ಮೈದಾನದ ಉದ್ದಗಲ ಲೀಲಾಜಾಲವಾಗಿ ಬ್ಯಾಟ್‌ ಬೀಸಿದ ಅವರು 143 ರನ್ ಗಳಿಸಿದರೆ, ಹರ್ಲಿನ್ ಡಿಯೋಲ್​​ ​(58) ರನ್​​ ಸೇರಿಸಿ ತಂಡ 300 ರನ್‌ ಗಡಿ ದಾಟುವಂತೆ ಮಾಡಿದರು. ಕೌರ್ ಅಬ್ಬರದ ಆಟದಲ್ಲಿ 18 ಬೌಂಡರಿ, 4 ಸಿಕ್ಸರ್​ ಸೇರಿದ್ದವು. ಇನ್ನು, ಸ್ಮೃತಿ ಮಂದಾನ (40) ರನ್ ಪೇರಿಸಿದರು.

334 ರನ್​​ಗಳ ಸವಾಲಿನ ಟಾರ್ಗೆಟ್‌ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡ ಕೇವಲ 12 ರನ್​​​​ ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಕ್ಯಾಪ್ಸೆ (39), ಡೇನಿಲ್ ​​​(65), ಜಾನ್ಸಿ (39) ರನ್​​​ಗಳಿಸಿ ತಂಡವನ್ನು ಗೆಲುವಿನ ದಡದತ್ತ ತೆಗೆದುಕೊಂಡು ಹೋಗುವ ಮುನ್ಸೂಚನೆ ನೀಡಿದರು. ಆದರೆ, ಇವರ ವಿಕೆಟ್ ಕೀಳುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಮಹಿಳೆಯರು ಮೇಲುಗೈ ಸಾಧಿಸಿದರು. ಕೊನೆಯದಾಗಿ, ತಂಡ 44.2 ಓವರ್​​​​​ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 245 ರನ್​​ಗಳಿಸಲು ಮಾತ್ರ ಸಾಧ್ಯವಾಯಿತು. ಹೀಗಾಗಿ, ಆಂಗ್ಲ ಮಹಿಳೆಯರು 88 ರನ್​​​ಗಳ ದೊಡ್ಡ ಅಂತರದ ಸೋಲು ಕಂಡರು.

ಬೌಲರ್ ರೇಣುಕಾ ಸಿಂಗ್​ 4 ವಿಕೆಟ್​​ ಪಡೆದರೆ, ಹೇಮಲತಾ 2, ಶೆಫಾಲಿ ಹಾಗೂ ದೀಪ್ತಿ ಶರ್ಮಾ 1 ವಿಕೆಟ್ ಉರುಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿಯೂ ಭಾರತೀಯರು ಗೆಲುವು ಸಾಧಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದ್ದಾರೆ.

 

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago