ಕ್ರೀಡೆ

ವನಿತೆಯರ ಟಿ20 ವಿಶ್ವಕಪ್‌ 2024: ಪಾಕ್‌ ಮಣಿಸಿದ ಭಾರತ

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವನಿತೆಯರ ಟಿ20 ವಿಶ್ವಕಪ್‌ 2024 ಟೂರ್ನಿಯ ಗ್ರೂಪ್‌ ಹಂತದ 7ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 105 ರನ್‌ ಕಲೆಹಾಕಿ ಭಾರತಕ್ಕೆ ಗೆಲ್ಲಲು 106 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್‌ ಇಂಡಿಯಾ 18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 108 ರನ್‌ ಕಲೆಹಾಕಿತು. ಈ ಮೂಲಕ ಟೂರ್ನಿಯಲ್ಲಿ ಮೊದಲ ಬಾರಿಗೆ ಜಯ ಕಂಡಿತು.

ಪಾಕ್‌ ಇನ್ನಿಂಗ್ಸ್:‌ ಭಾರತದ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಪಾಕ್‌ ಆರಂಭದಲ್ಲೇ ಆಘಾತ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿತು, ಬೇಗನೆ ತನ್ನ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ತಂಡದ ಪರ ಗುಲ್‌ ಫೆರೋಜಾ 0, ಮುನೀಬಾ ಅಲಿ 17, ಸಿದ್ರಾ ಅಮಿನ್‌ 8, ಒಮೈಮಾ ಸೊಹೈಲ್‌ 3, ನಿದಾ ದರ್‌ 28, ಅಲಿಯಾ ರಿಯಾಜ್‌ 4, ನಾಯಕಿ ಫಾತಿಮಾ ಸನಾ 13, ತುಬಾ ಹಸನ್‌ 0, ಸೈದಾ ಅರೂಬ್‌ ಶಾ ಅಜೇಯ 14 ಮತ್ತು ನಶ್ರಾ ಸಂದು ಅಜೇಯ 6 ರನ್‌ ಗಳಿಸಿದರು.

ಭಾರತದ ಪರ ಅರುಂಧತಿ ರೆಡ್ಡಿ 3 ವಿಕೆಟ್‌, ಶ್ರೇಯಾಂಕ ಪಾಟೀಲ್‌ 2, ಆಶಾ ಶೋಭನ, ರೇಣುಕಾ ಸಿಂಗ್‌ ಮತ್ತು ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್: ಭಾರತದ ಪರ ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಆರಂಭಿಕರಾಗಿ ಕಣಕ್ಕಿಳಿದರು. ಈ ಪೈಕಿ ಸ್ಮೃತಿ ಮಂಧಾನ 7 ರನ್ ಗಳಿಸಿದರೆ, ಶೆಫಾಲಿ ವರ್ಮಾ 32 ರನ್‌ ಗಳಿಸಿದರು. ರೊಡ್ರಿಗ್ಯೂಸ್‌ 23 ರನ್‌ ಬಾರಿಸಿದರೆ, ರಿಚಾ ಘೋಷ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್‌ ಅಜೇಯ 29 ರನ್‌ ಗಳಿಸಿ ಕುತ್ತಿಗೆ ನೋವು ಕಾಣಿಸಿಕೊಂಡ ಕಾರಣ ರಿಟೈರ್ಡ್‌ ಹರ್ಟ್ ಆದರು. ದೀಪ್ತಿ ಶರ್ಮಾ ಅಜೇಯ 7 ರನ್‌ ಮತ್ತು ಎಸ್‌ ಸಂಜನ ಅಜೇಯ 4 ರನ್‌ ಗಳಿಸಿದರು.

ಪಾಕಿಸ್ತಾನದ ಪರ ಫಾತಿಮಾ ಸನಾ 2 ವಿಕೆಟ್‌, ಸಾದಿಯಾ ಇಕ್ಬಾಲ್‌ ಮತ್ತು ಒಮೈಮಾ ಸೊಹೈಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಸ್ತೀಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…

35 seconds ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

23 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

47 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago