ಕ್ರೀಡೆ

ವನಿತೆಯರ ಟಿ20 ವಿಶ್ವಕಪ್‌ 2024: ಪಾಕ್‌ ಮಣಿಸಿದ ಭಾರತ

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವನಿತೆಯರ ಟಿ20 ವಿಶ್ವಕಪ್‌ 2024 ಟೂರ್ನಿಯ ಗ್ರೂಪ್‌ ಹಂತದ 7ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 105 ರನ್‌ ಕಲೆಹಾಕಿ ಭಾರತಕ್ಕೆ ಗೆಲ್ಲಲು 106 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್‌ ಇಂಡಿಯಾ 18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 108 ರನ್‌ ಕಲೆಹಾಕಿತು. ಈ ಮೂಲಕ ಟೂರ್ನಿಯಲ್ಲಿ ಮೊದಲ ಬಾರಿಗೆ ಜಯ ಕಂಡಿತು.

ಪಾಕ್‌ ಇನ್ನಿಂಗ್ಸ್:‌ ಭಾರತದ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಪಾಕ್‌ ಆರಂಭದಲ್ಲೇ ಆಘಾತ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿತು, ಬೇಗನೆ ತನ್ನ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ತಂಡದ ಪರ ಗುಲ್‌ ಫೆರೋಜಾ 0, ಮುನೀಬಾ ಅಲಿ 17, ಸಿದ್ರಾ ಅಮಿನ್‌ 8, ಒಮೈಮಾ ಸೊಹೈಲ್‌ 3, ನಿದಾ ದರ್‌ 28, ಅಲಿಯಾ ರಿಯಾಜ್‌ 4, ನಾಯಕಿ ಫಾತಿಮಾ ಸನಾ 13, ತುಬಾ ಹಸನ್‌ 0, ಸೈದಾ ಅರೂಬ್‌ ಶಾ ಅಜೇಯ 14 ಮತ್ತು ನಶ್ರಾ ಸಂದು ಅಜೇಯ 6 ರನ್‌ ಗಳಿಸಿದರು.

ಭಾರತದ ಪರ ಅರುಂಧತಿ ರೆಡ್ಡಿ 3 ವಿಕೆಟ್‌, ಶ್ರೇಯಾಂಕ ಪಾಟೀಲ್‌ 2, ಆಶಾ ಶೋಭನ, ರೇಣುಕಾ ಸಿಂಗ್‌ ಮತ್ತು ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್: ಭಾರತದ ಪರ ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಆರಂಭಿಕರಾಗಿ ಕಣಕ್ಕಿಳಿದರು. ಈ ಪೈಕಿ ಸ್ಮೃತಿ ಮಂಧಾನ 7 ರನ್ ಗಳಿಸಿದರೆ, ಶೆಫಾಲಿ ವರ್ಮಾ 32 ರನ್‌ ಗಳಿಸಿದರು. ರೊಡ್ರಿಗ್ಯೂಸ್‌ 23 ರನ್‌ ಬಾರಿಸಿದರೆ, ರಿಚಾ ಘೋಷ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್‌ ಅಜೇಯ 29 ರನ್‌ ಗಳಿಸಿ ಕುತ್ತಿಗೆ ನೋವು ಕಾಣಿಸಿಕೊಂಡ ಕಾರಣ ರಿಟೈರ್ಡ್‌ ಹರ್ಟ್ ಆದರು. ದೀಪ್ತಿ ಶರ್ಮಾ ಅಜೇಯ 7 ರನ್‌ ಮತ್ತು ಎಸ್‌ ಸಂಜನ ಅಜೇಯ 4 ರನ್‌ ಗಳಿಸಿದರು.

ಪಾಕಿಸ್ತಾನದ ಪರ ಫಾತಿಮಾ ಸನಾ 2 ವಿಕೆಟ್‌, ಸಾದಿಯಾ ಇಕ್ಬಾಲ್‌ ಮತ್ತು ಒಮೈಮಾ ಸೊಹೈಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago