ಕ್ರೀಡೆ

ವನಿತೆಯರ ಟಿ20 ವಿಶ್ವಕಪ್‌ 2024: ಪಾಕ್‌ ಮಣಿಸಿದ ಭಾರತ

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವನಿತೆಯರ ಟಿ20 ವಿಶ್ವಕಪ್‌ 2024 ಟೂರ್ನಿಯ ಗ್ರೂಪ್‌ ಹಂತದ 7ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 105 ರನ್‌ ಕಲೆಹಾಕಿ ಭಾರತಕ್ಕೆ ಗೆಲ್ಲಲು 106 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್‌ ಇಂಡಿಯಾ 18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 108 ರನ್‌ ಕಲೆಹಾಕಿತು. ಈ ಮೂಲಕ ಟೂರ್ನಿಯಲ್ಲಿ ಮೊದಲ ಬಾರಿಗೆ ಜಯ ಕಂಡಿತು.

ಪಾಕ್‌ ಇನ್ನಿಂಗ್ಸ್:‌ ಭಾರತದ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಪಾಕ್‌ ಆರಂಭದಲ್ಲೇ ಆಘಾತ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿತು, ಬೇಗನೆ ತನ್ನ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ತಂಡದ ಪರ ಗುಲ್‌ ಫೆರೋಜಾ 0, ಮುನೀಬಾ ಅಲಿ 17, ಸಿದ್ರಾ ಅಮಿನ್‌ 8, ಒಮೈಮಾ ಸೊಹೈಲ್‌ 3, ನಿದಾ ದರ್‌ 28, ಅಲಿಯಾ ರಿಯಾಜ್‌ 4, ನಾಯಕಿ ಫಾತಿಮಾ ಸನಾ 13, ತುಬಾ ಹಸನ್‌ 0, ಸೈದಾ ಅರೂಬ್‌ ಶಾ ಅಜೇಯ 14 ಮತ್ತು ನಶ್ರಾ ಸಂದು ಅಜೇಯ 6 ರನ್‌ ಗಳಿಸಿದರು.

ಭಾರತದ ಪರ ಅರುಂಧತಿ ರೆಡ್ಡಿ 3 ವಿಕೆಟ್‌, ಶ್ರೇಯಾಂಕ ಪಾಟೀಲ್‌ 2, ಆಶಾ ಶೋಭನ, ರೇಣುಕಾ ಸಿಂಗ್‌ ಮತ್ತು ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

ಭಾರತದ ಇನ್ನಿಂಗ್ಸ್: ಭಾರತದ ಪರ ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಆರಂಭಿಕರಾಗಿ ಕಣಕ್ಕಿಳಿದರು. ಈ ಪೈಕಿ ಸ್ಮೃತಿ ಮಂಧಾನ 7 ರನ್ ಗಳಿಸಿದರೆ, ಶೆಫಾಲಿ ವರ್ಮಾ 32 ರನ್‌ ಗಳಿಸಿದರು. ರೊಡ್ರಿಗ್ಯೂಸ್‌ 23 ರನ್‌ ಬಾರಿಸಿದರೆ, ರಿಚಾ ಘೋಷ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್‌ ಅಜೇಯ 29 ರನ್‌ ಗಳಿಸಿ ಕುತ್ತಿಗೆ ನೋವು ಕಾಣಿಸಿಕೊಂಡ ಕಾರಣ ರಿಟೈರ್ಡ್‌ ಹರ್ಟ್ ಆದರು. ದೀಪ್ತಿ ಶರ್ಮಾ ಅಜೇಯ 7 ರನ್‌ ಮತ್ತು ಎಸ್‌ ಸಂಜನ ಅಜೇಯ 4 ರನ್‌ ಗಳಿಸಿದರು.

ಪಾಕಿಸ್ತಾನದ ಪರ ಫಾತಿಮಾ ಸನಾ 2 ವಿಕೆಟ್‌, ಸಾದಿಯಾ ಇಕ್ಬಾಲ್‌ ಮತ್ತು ಒಮೈಮಾ ಸೊಹೈಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago