ಕ್ರೀಡೆ

ವನಿತೆಯರ ಏಷ್ಯಾಕಪ್‌ 2024 ವೇಳಾಪಟ್ಟಿ ಪ್ರಕಟ: ಭಾರತ-ಪಾಕಿಸ್ತಾನ ಕಾದಾಟಕ್ಕೆ ವೇದಿಕೆ ಸಜ್ಜು

ಶ್ರೀಲಂಕಾ: ಬಹುನಿರೀಕ್ಷಿತಾ ವನಿತೆಯರ ಏಷ್ಯಾಕಪ್‌ 2024ರ ವೇಳಾಪಟ್ಟಿ ಕೊನೆಯೂ ಪ್ರಕಟವಾಗಿದೆ. ಇದೇ ಜು.19ರಿಂದ ಜು.28 ವರೆಗೆ ಈ ಟೂರ್ನಿ ನಡೆಯಲಿದೆ.

ಶ್ರೀಲಂಕಾ ಕ್ರಿಕೆಟ್‌ ಈ ಟೂರ್ನಿಯನ್ನು ಆಯೋಜಿಸುತ್ತಿದ್ದು, ಒಟ್ಟು ಎಂಟು ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಮೊದಲ ಗುಂಪಿನಲ್ಲಿ ಬದ್ಧ ವೈರಿಗಳಾದ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇತ್ತಂಡಗಳು ಜು.19ರಂದು ಸಂಜೆ 7ಕ್ಕೆ ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಲಿವೆ.

ಇನ್ನು ಈ ಟೂರ್ನಿಯ ಆತಿಥ್ಯ ವಹಿಸಿರುವ ಶ್ರೀಲಂಕಾ ತನ್ನ ಮೊದಲ ಪಂದ್ಯವನ್ನು ಜು.20 ರಂದು ಆಡಲಿದೆ. ಈ ಟೂರ್ನಿಯ ಎಲ್ಲಾ ಪಂದ್ಯಗಳು ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಾರ್ವಜನಿಕರಿಗೆ ಪಂದ್ಯ ವೀಕ್ಷಣೆಗೆ ಉಚಿತ ಪ್ರವೇಶ ನೀಡುವುದಾಗಿ ಕ್ರಿಕೆಟ್‌ ಮಂಡಳಿ ಘೋಷಿಸಿದೆ.

ಈ ಟೂರ್ನಿಯಲ್ಲಿ ಒಟ್ಟು 2 ಗುಂಪುಗಳಿದ್ದು, ʼಎʼ ಗುಂಪಿನಲ್ಲಿ ನಾಲ್ಕು ತಂಡಗಳು ಹಾಗೂ ʼಬಿʼ ಗುಂಪಿನಲ್ಲಿ ನಾಲ್ಕು ತಂಡಗಳು ಸ್ಥಾನ ಪಡೆದಿವೆ. ಈ ಎರಡು ಗುಂಪಿನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಸ್‌ಗೆ ಅರ್ಹತೆ ಪಡೆಯಲಿವೆ. ಹಾಗೂ ಸೆಮಿಸ್‌ನಲ್ಲಿ ಮೊದಲ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಮೊದಲ ತಂಡಕ್ಕು ಎರಡನೇ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದ ನಡುವೆ ಮೊದಲ ಸೆಮಿಸ್‌ ಪಂದ್ಯ ನಡೆಯುತ್ತದೆ. ಹಾಗೆಯೇ ಎರಡನೇ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತು ಮೊದಲ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದ ನಡುವೆ ಎರಡನೇ ಸೆಮಿಸ್‌ ಪಂದ್ಯ ನಡೆಯಲಿದೆ.

ಈ ಪಂದ್ಯಗಳಲ್ಲಿ ಗೆದ್ದ ತಂಡಗಳು ಫೈನಲ್‌ಗೆ ಪ್ರವೇಶ ಪಡೆಯಲಿದ್ದು, ಫೈನಲ್‌ನಲ್ಲಿ ಗೆದ್ದ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ.

ವೇಳಾಪಟ್ಟಿ ಇಂತಿದೆ:

ಜು.19:
ಮೊದಲ ಪಂದ್ಯ: ಯುಎಇ vs ನೇಪಾಳ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೆ ಪಂದ್ಯ: ಭಾರತ vs ಪಾಕಿಸ್ತಾನ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.20
ಮೊದಲ ಪಂದ್ಯ: ಮಲೇಷಿಯಾ vs ಥಾಯ್ಲೆಂಡ್‌ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಶ್ರೀಲಂಕಾ vs ಬಾಂಗ್ಲಾದೇಶ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.21
ಮೊದಲ ಪಂದ್ಯ: ಭಾರತ vs ಯುಎಇ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಪಾಕಿಸ್ತಾನ vs ನೇಪಾಳ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.22
ಮೊದಲ ಪಂದ್ಯ: ಶ್ರೀಲಂಕಾ vs ಮಲೇಷಿಯಾ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಬಾಂಗ್ಲಾದೇಶ vs ಥಾಯ್ಲೆಂಡ್‌ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.23
ಮೊದಲ ಪಂದ್ಯ: ಪಾಕಿಸ್ತಾನ vs ಯುಎಇ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಭಾರತ vs ನೇಪಾಳ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.24
ಮೊದಲ ಪಂದ್ಯ: ಬಾಂಗ್ಲಾದೇಶ vs ಮಲೇಷಿಯಾ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಶ್ರೀಲಂಕಾ vs ಥಾಯ್ಲೆಂಡ್‌ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು. 26 ರಂದು ಸೆಮಿಸ್‌ ಹಾಗೂ ಜು.28 ರಂದು ಫೈನಲ್‌ ಪಂದ್ಯ ನೆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

17 mins ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

44 mins ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

1 hour ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

2 hours ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

2 hours ago