ಕ್ರೀಡೆ

ವನಿತೆಯರ ಏಷ್ಯಾಕಪ್‌ 2024 ವೇಳಾಪಟ್ಟಿ ಪ್ರಕಟ: ಭಾರತ-ಪಾಕಿಸ್ತಾನ ಕಾದಾಟಕ್ಕೆ ವೇದಿಕೆ ಸಜ್ಜು

ಶ್ರೀಲಂಕಾ: ಬಹುನಿರೀಕ್ಷಿತಾ ವನಿತೆಯರ ಏಷ್ಯಾಕಪ್‌ 2024ರ ವೇಳಾಪಟ್ಟಿ ಕೊನೆಯೂ ಪ್ರಕಟವಾಗಿದೆ. ಇದೇ ಜು.19ರಿಂದ ಜು.28 ವರೆಗೆ ಈ ಟೂರ್ನಿ ನಡೆಯಲಿದೆ.

ಶ್ರೀಲಂಕಾ ಕ್ರಿಕೆಟ್‌ ಈ ಟೂರ್ನಿಯನ್ನು ಆಯೋಜಿಸುತ್ತಿದ್ದು, ಒಟ್ಟು ಎಂಟು ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಮೊದಲ ಗುಂಪಿನಲ್ಲಿ ಬದ್ಧ ವೈರಿಗಳಾದ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇತ್ತಂಡಗಳು ಜು.19ರಂದು ಸಂಜೆ 7ಕ್ಕೆ ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಲಿವೆ.

ಇನ್ನು ಈ ಟೂರ್ನಿಯ ಆತಿಥ್ಯ ವಹಿಸಿರುವ ಶ್ರೀಲಂಕಾ ತನ್ನ ಮೊದಲ ಪಂದ್ಯವನ್ನು ಜು.20 ರಂದು ಆಡಲಿದೆ. ಈ ಟೂರ್ನಿಯ ಎಲ್ಲಾ ಪಂದ್ಯಗಳು ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಾರ್ವಜನಿಕರಿಗೆ ಪಂದ್ಯ ವೀಕ್ಷಣೆಗೆ ಉಚಿತ ಪ್ರವೇಶ ನೀಡುವುದಾಗಿ ಕ್ರಿಕೆಟ್‌ ಮಂಡಳಿ ಘೋಷಿಸಿದೆ.

ಈ ಟೂರ್ನಿಯಲ್ಲಿ ಒಟ್ಟು 2 ಗುಂಪುಗಳಿದ್ದು, ʼಎʼ ಗುಂಪಿನಲ್ಲಿ ನಾಲ್ಕು ತಂಡಗಳು ಹಾಗೂ ʼಬಿʼ ಗುಂಪಿನಲ್ಲಿ ನಾಲ್ಕು ತಂಡಗಳು ಸ್ಥಾನ ಪಡೆದಿವೆ. ಈ ಎರಡು ಗುಂಪಿನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಸ್‌ಗೆ ಅರ್ಹತೆ ಪಡೆಯಲಿವೆ. ಹಾಗೂ ಸೆಮಿಸ್‌ನಲ್ಲಿ ಮೊದಲ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಮೊದಲ ತಂಡಕ್ಕು ಎರಡನೇ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದ ನಡುವೆ ಮೊದಲ ಸೆಮಿಸ್‌ ಪಂದ್ಯ ನಡೆಯುತ್ತದೆ. ಹಾಗೆಯೇ ಎರಡನೇ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತು ಮೊದಲ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದ ನಡುವೆ ಎರಡನೇ ಸೆಮಿಸ್‌ ಪಂದ್ಯ ನಡೆಯಲಿದೆ.

ಈ ಪಂದ್ಯಗಳಲ್ಲಿ ಗೆದ್ದ ತಂಡಗಳು ಫೈನಲ್‌ಗೆ ಪ್ರವೇಶ ಪಡೆಯಲಿದ್ದು, ಫೈನಲ್‌ನಲ್ಲಿ ಗೆದ್ದ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ.

ವೇಳಾಪಟ್ಟಿ ಇಂತಿದೆ:

ಜು.19:
ಮೊದಲ ಪಂದ್ಯ: ಯುಎಇ vs ನೇಪಾಳ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೆ ಪಂದ್ಯ: ಭಾರತ vs ಪಾಕಿಸ್ತಾನ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.20
ಮೊದಲ ಪಂದ್ಯ: ಮಲೇಷಿಯಾ vs ಥಾಯ್ಲೆಂಡ್‌ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಶ್ರೀಲಂಕಾ vs ಬಾಂಗ್ಲಾದೇಶ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.21
ಮೊದಲ ಪಂದ್ಯ: ಭಾರತ vs ಯುಎಇ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಪಾಕಿಸ್ತಾನ vs ನೇಪಾಳ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.22
ಮೊದಲ ಪಂದ್ಯ: ಶ್ರೀಲಂಕಾ vs ಮಲೇಷಿಯಾ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಬಾಂಗ್ಲಾದೇಶ vs ಥಾಯ್ಲೆಂಡ್‌ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.23
ಮೊದಲ ಪಂದ್ಯ: ಪಾಕಿಸ್ತಾನ vs ಯುಎಇ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಭಾರತ vs ನೇಪಾಳ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು.24
ಮೊದಲ ಪಂದ್ಯ: ಬಾಂಗ್ಲಾದೇಶ vs ಮಲೇಷಿಯಾ (ಮದ್ಯಾಹ್ನ 2 ಗಂಟೆ, ರಂಗಿರಿ ಡಂಬುಲ್ಲಾ ಕ್ರೀಡಾಂಗಣ)
ಎರಡನೇ ಪಂದ್ಯ: ಶ್ರೀಲಂಕಾ vs ಥಾಯ್ಲೆಂಡ್‌ (ಸಂಜೆ 7 ಗಂಟೆ, ರಂಗಿರಿ ಡಂಬುಲ್ಲಾ ಕ್ರಿಡಾಂಗಣ)

ಜು. 26 ರಂದು ಸೆಮಿಸ್‌ ಹಾಗೂ ಜು.28 ರಂದು ಫೈನಲ್‌ ಪಂದ್ಯ ನೆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago