ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಫೈನಲ್ ತಲುಪಿದ ಭಾರತೀಯ ಪುರುಷರ ರಿಲೇ ತಂಡ

ಬುಡಾಪೆಸ್ಟ್ : ಭಾರತೀಯ ಪುರುಷರ 4×400 ಮೀ. ರಿಲೇ ತಂಡವು ಶನಿವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 2 ನಿಮಿಷ 59.05 ಸೆಕೆಂಡ್ ಗಳಲ್ಲಿ ಗುರಿ ತಲುಪಿ ಮೊದಲ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಲ್ಲದೆ ಏಶ್ಯನ್ ದಾಖಲೆಯನ್ನು ಮುರಿದಿದೆ.

ಮುಹಮ್ಮದ್ ಅನಸ್ ಯಾಹಿಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ವರಿಯಥೋಡಿ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತದ ರಿಲೇ ತಂಡವು ಯುಎಸ್ಎ (2:58.47) ನಂತರ ಹೀಟ್ ನಂಬರ್ ಒನ್ ನಲ್ಲಿ ಎರಡನೇ ಸ್ಥಾನ ಪಡೆದು ರವಿವಾರ ನಡೆಯಲಿರುವ ಫೈನಲ್ ಗೆ ಅರ್ಹತೆ ಪಡೆಯಿತು.

ಪ್ರತಿ ಎರಡು ಹೀಟ್ಸ್ ನಲ್ಲಿ ಅಗ್ರ ಮೂರು ಸ್ಥಾನ ಪಡೆದವರು ಹಾಗೂ ವೇಗವಾಗಿ ಗುರಿ ತಲುಪಿದ ಇಬ್ಬರು ಓಟಗಾರರು ಫೈನಲ್ಗೆ ಅರ್ಹತೆ ಪಡೆಯುತ್ತಾರೆ.

ಹಿಂದಿನ ಏಶ್ಯನ್ ದಾಖಲೆ (2:59.51) ಜಪಾನ್ ತಂಡದ ಹೆಸರಿನಲ್ಲಿತ್ತು. ಹಿಂದಿನ ರಾಷ್ಟ್ರೀಯ ದಾಖಲೆ (3:00.25) 2021 ರಲ್ಲಿ ನಿರ್ಮಾಣ ಆಗಿತ್ತು.

ಭಾರತೀಯರು ವಿಶ್ವ ದಾಖಲೆ ಹೊಂದಿರುವ ಅಮೆರಿಕನ್ನರಿಗೆ ತೀವ್ರ ಹೋರಾಟ ನೀಡಿದ್ದು ಅಮೆರಿಕದ ನಂತರ 2ನೇ ಸ್ಥಾನ ಪಡೆದರು.

ಭಾರತವು ಅಂತಿಮವಾಗಿ ಎರಡು ಹೀಟ್ಸ್ ಗಳ ನಂತರ ಅಮೆರಿಕದ ನಂತರ ಎರಡನೇ ಸ್ಥಾನ ಗಳಿಸಿತು, ಆದರೆ ಗ್ರೇಟ್ ಬ್ರಿಟನ್ (3ನೇ ಸ್ಥಾನ ; 2:59.42) ಹಾಗೂ ಜಮೈಕಾ (5ನೇ; 2:59.82) ದಂತಹ ಪ್ರಬಲ ತಂಡಗಳನ್ನುಹಿಂದಿಕ್ಕಿತು.

andolanait

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

25 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

1 hour ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago