ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಫೈನಲ್ ತಲುಪಿದ ಭಾರತೀಯ ಪುರುಷರ ರಿಲೇ ತಂಡ

ಬುಡಾಪೆಸ್ಟ್ : ಭಾರತೀಯ ಪುರುಷರ 4×400 ಮೀ. ರಿಲೇ ತಂಡವು ಶನಿವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 2 ನಿಮಿಷ 59.05 ಸೆಕೆಂಡ್ ಗಳಲ್ಲಿ ಗುರಿ ತಲುಪಿ ಮೊದಲ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಲ್ಲದೆ ಏಶ್ಯನ್ ದಾಖಲೆಯನ್ನು ಮುರಿದಿದೆ.

ಮುಹಮ್ಮದ್ ಅನಸ್ ಯಾಹಿಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ವರಿಯಥೋಡಿ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತದ ರಿಲೇ ತಂಡವು ಯುಎಸ್ಎ (2:58.47) ನಂತರ ಹೀಟ್ ನಂಬರ್ ಒನ್ ನಲ್ಲಿ ಎರಡನೇ ಸ್ಥಾನ ಪಡೆದು ರವಿವಾರ ನಡೆಯಲಿರುವ ಫೈನಲ್ ಗೆ ಅರ್ಹತೆ ಪಡೆಯಿತು.

ಪ್ರತಿ ಎರಡು ಹೀಟ್ಸ್ ನಲ್ಲಿ ಅಗ್ರ ಮೂರು ಸ್ಥಾನ ಪಡೆದವರು ಹಾಗೂ ವೇಗವಾಗಿ ಗುರಿ ತಲುಪಿದ ಇಬ್ಬರು ಓಟಗಾರರು ಫೈನಲ್ಗೆ ಅರ್ಹತೆ ಪಡೆಯುತ್ತಾರೆ.

ಹಿಂದಿನ ಏಶ್ಯನ್ ದಾಖಲೆ (2:59.51) ಜಪಾನ್ ತಂಡದ ಹೆಸರಿನಲ್ಲಿತ್ತು. ಹಿಂದಿನ ರಾಷ್ಟ್ರೀಯ ದಾಖಲೆ (3:00.25) 2021 ರಲ್ಲಿ ನಿರ್ಮಾಣ ಆಗಿತ್ತು.

ಭಾರತೀಯರು ವಿಶ್ವ ದಾಖಲೆ ಹೊಂದಿರುವ ಅಮೆರಿಕನ್ನರಿಗೆ ತೀವ್ರ ಹೋರಾಟ ನೀಡಿದ್ದು ಅಮೆರಿಕದ ನಂತರ 2ನೇ ಸ್ಥಾನ ಪಡೆದರು.

ಭಾರತವು ಅಂತಿಮವಾಗಿ ಎರಡು ಹೀಟ್ಸ್ ಗಳ ನಂತರ ಅಮೆರಿಕದ ನಂತರ ಎರಡನೇ ಸ್ಥಾನ ಗಳಿಸಿತು, ಆದರೆ ಗ್ರೇಟ್ ಬ್ರಿಟನ್ (3ನೇ ಸ್ಥಾನ ; 2:59.42) ಹಾಗೂ ಜಮೈಕಾ (5ನೇ; 2:59.82) ದಂತಹ ಪ್ರಬಲ ತಂಡಗಳನ್ನುಹಿಂದಿಕ್ಕಿತು.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago