ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : ಕನ್ನಡಿಗ ಡಿ.ಪಿ. ಮನು, ಕಿಶೋರ್ ಫೈನಲ್ ಗೆ ಪ್ರವೇಶ

ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.

ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದು ಫೈನಲ್ ಗೆ ಲಗ್ಗೆ ಇಟ್ಟರೆ, ಕನ್ನಡಿಗ ಡಿ.ಪಿ. ಮನು(81.31) ಎ ಗುಂಪಿನಲ್ಲಿ ಜರ್ಮನಿಯ ಜುಲಿಯನ್ ವೆಬೆರ್ (82.39 ಮಿ.) ನಂತರ ಮೂರನೇ ಸ್ಥಾನ ಹಾಗೂ ಒಟ್ಟಾರೆ ಆರನೇ ಸ್ಥಾನ ಪಡೆದು ಫೈನಲ್ ನಲ್ಲಿ ಸ್ಥಾನ ಪಡೆದು ಫೈನಲ್ ಗೆ ತಲುಪಿದರು.

ಕಿಶೋರ್ ಜೇನಾ 80.55 ಮೀ. ಜಾವೆಲಿನ್ ಎಸೆತದ ಮೂಲಕ ಬಿ ಗುಂಪಿನ ಅರ್ಹತಾ ಸುತ್ತಿನಲ್ಲಿ 5ನೇ ಹಾಗೂ ಒಟ್ಟಾರೆ 9ನೇ ಸ್ಥಾನ ಪಡೆದು ಫೈನಲ್ ಗೆ ತೇರ್ಗಡೆಯಾದರು.

ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ಮನು ತನ್ನ 2ನೇ ಪ್ರಯತ್ನದಲ್ಲಿ 81.31 ಮೀ. ಜಾವೆಲಿನ್ ಎಸೆದಿದ್ದಾರೆ. ಆದರೆ ಅಂತಿಮ ಥ್ರೋನಲ್ಲಿ 72.4 ಮೀ.ದೂರಕ್ಕೆ ಜಾವೆಲಿನ್ ಎಸೆದರು.

ಫೈನಲ್ ಪಂದ್ಯವು ಭಾನುವಾರ ನಡೆಯಲಿದೆ.

 

andolanait

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

29 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

48 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

1 hour ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

3 hours ago