ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆದು ಫೈನಲ್ ಗೆ ಲಗ್ಗೆ ಇಟ್ಟರೆ, ಕನ್ನಡಿಗ ಡಿ.ಪಿ. ಮನು(81.31) ಎ ಗುಂಪಿನಲ್ಲಿ ಜರ್ಮನಿಯ ಜುಲಿಯನ್ ವೆಬೆರ್ (82.39 ಮಿ.) ನಂತರ ಮೂರನೇ ಸ್ಥಾನ ಹಾಗೂ ಒಟ್ಟಾರೆ ಆರನೇ ಸ್ಥಾನ ಪಡೆದು ಫೈನಲ್ ನಲ್ಲಿ ಸ್ಥಾನ ಪಡೆದು ಫೈನಲ್ ಗೆ ತಲುಪಿದರು.
ಕಿಶೋರ್ ಜೇನಾ 80.55 ಮೀ. ಜಾವೆಲಿನ್ ಎಸೆತದ ಮೂಲಕ ಬಿ ಗುಂಪಿನ ಅರ್ಹತಾ ಸುತ್ತಿನಲ್ಲಿ 5ನೇ ಹಾಗೂ ಒಟ್ಟಾರೆ 9ನೇ ಸ್ಥಾನ ಪಡೆದು ಫೈನಲ್ ಗೆ ತೇರ್ಗಡೆಯಾದರು.
ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ಮನು ತನ್ನ 2ನೇ ಪ್ರಯತ್ನದಲ್ಲಿ 81.31 ಮೀ. ಜಾವೆಲಿನ್ ಎಸೆದಿದ್ದಾರೆ. ಆದರೆ ಅಂತಿಮ ಥ್ರೋನಲ್ಲಿ 72.4 ಮೀ.ದೂರಕ್ಕೆ ಜಾವೆಲಿನ್ ಎಸೆದರು.
ಫೈನಲ್ ಪಂದ್ಯವು ಭಾನುವಾರ ನಡೆಯಲಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…