ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಪಾರುಲ್

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ ಅತ್ಲೀಟ್ ಪಾರುಲ್ ಚೌಧರಿ ಹನ್ನೊಂದನೇ ಸ್ಥಾನ ಪಡೆದರು.

ಆದಾಗ್ಯೂ, ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪಾರುಲ್ 9:15.31 ಕ್ಕೆ ಗುರಿ ತಲುಪುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ಮುರಿದರು.

ರಾಷ್ಟ್ರೀಯ ದಾಖಲೆಯನ್ನು ಸಾಧಿಸುವ ಮೂಲಕ ಪಾರುಲ್ 2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದರು.

ಬ್ರೂನಿ ಅಥ್ಲೀಟ್ ವಿನ್ ಫ್ರೆಡ್ ಮ್ಯೂಟಿಲ್ ಯವಿ 8:54.29 ಸಮಯದೊಂದಿಗೆ ಗುರಿ ತಲುಪಿ ಚಿನ್ನದ ಪದಕವನ್ನು ಪಡೆದರು, ಕೀನ್ಯಾದ ಬೀಟ್ರಿಸ್ ಚೆಪ್ಕೋಚ್ ಅವರು ತಮ್ಮ ಋತುವಿನ ಅತ್ಯುತ್ತಮ ಸಮಯ 8:58.98 ಸೆಕೆಂಡ್ಗೆ ಗುರಿ ತಲುಪಿ ಬೆಳ್ಳಿ ಗೆದ್ದರು ಹಾಗೂ ಕೀನ್ಯಾದ ಇನ್ನೊಬ್ಬ ಅಥ್ಲೀಟ್ ಫೇಯ್ತ್ ಚೆರೊಟಿಚ್ ತಮ್ಮ ವೈಯಕ್ತಿಕ ಅತ್ಯುತ್ತಮ ಮಾರ್ಕ್ 69:00 ಗೆಲುವನ್ನು ಸಾಧಿಸಿ. ಕಂಚು ಗೆದ್ದರು.

ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4×400 ಮೀಟರ್ಸ್ ರಿಲೇ ತಂಡವು 4×400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು.

ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತ ತಂಡವು 2:59.92 ಸೆಕೆಂಡ್ ಗೆ ಗುರಿ ತಲುಪಿತು.

ಕ್ವಿನ್ಸಿ ಹಾಲ್, ವೆರ್ನಾನ್ ನಾರ್ವುಡ್, ಜಸ್ಟಿನ್ ರಾಬಿನ್ಸನ್ ಹಾಗೂ ರೈ ಬೆಂಜಮಿನ್ವಾನ್ ಅವರಿದ್ದ ಅಮೆರಿಕ ತಂಡವು 2:57.31 ಸೆಕೆಂಡ್ ಗೆ ಗುರಿ ತಲುಪಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಫ್ರಾನ್ಸ್ 2:58.45 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿಯನ್ನು ಪಡೆದರೆ, ಗ್ರೇಟ್ ಬ್ರಿಟನ್ 2:58.71 ಸೆಕೆಂಡ್ ನಲ್ಲಿ ಗುರಿ ತಲುಪಿ ಕಂಚು ಪಡೆದಿದೆ.

andolanait

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

26 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

3 hours ago