ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಪಾರುಲ್

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ ಅತ್ಲೀಟ್ ಪಾರುಲ್ ಚೌಧರಿ ಹನ್ನೊಂದನೇ ಸ್ಥಾನ ಪಡೆದರು.

ಆದಾಗ್ಯೂ, ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪಾರುಲ್ 9:15.31 ಕ್ಕೆ ಗುರಿ ತಲುಪುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ಮುರಿದರು.

ರಾಷ್ಟ್ರೀಯ ದಾಖಲೆಯನ್ನು ಸಾಧಿಸುವ ಮೂಲಕ ಪಾರುಲ್ 2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದರು.

ಬ್ರೂನಿ ಅಥ್ಲೀಟ್ ವಿನ್ ಫ್ರೆಡ್ ಮ್ಯೂಟಿಲ್ ಯವಿ 8:54.29 ಸಮಯದೊಂದಿಗೆ ಗುರಿ ತಲುಪಿ ಚಿನ್ನದ ಪದಕವನ್ನು ಪಡೆದರು, ಕೀನ್ಯಾದ ಬೀಟ್ರಿಸ್ ಚೆಪ್ಕೋಚ್ ಅವರು ತಮ್ಮ ಋತುವಿನ ಅತ್ಯುತ್ತಮ ಸಮಯ 8:58.98 ಸೆಕೆಂಡ್ಗೆ ಗುರಿ ತಲುಪಿ ಬೆಳ್ಳಿ ಗೆದ್ದರು ಹಾಗೂ ಕೀನ್ಯಾದ ಇನ್ನೊಬ್ಬ ಅಥ್ಲೀಟ್ ಫೇಯ್ತ್ ಚೆರೊಟಿಚ್ ತಮ್ಮ ವೈಯಕ್ತಿಕ ಅತ್ಯುತ್ತಮ ಮಾರ್ಕ್ 69:00 ಗೆಲುವನ್ನು ಸಾಧಿಸಿ. ಕಂಚು ಗೆದ್ದರು.

ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4×400 ಮೀಟರ್ಸ್ ರಿಲೇ ತಂಡವು 4×400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು.

ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತ ತಂಡವು 2:59.92 ಸೆಕೆಂಡ್ ಗೆ ಗುರಿ ತಲುಪಿತು.

ಕ್ವಿನ್ಸಿ ಹಾಲ್, ವೆರ್ನಾನ್ ನಾರ್ವುಡ್, ಜಸ್ಟಿನ್ ರಾಬಿನ್ಸನ್ ಹಾಗೂ ರೈ ಬೆಂಜಮಿನ್ವಾನ್ ಅವರಿದ್ದ ಅಮೆರಿಕ ತಂಡವು 2:57.31 ಸೆಕೆಂಡ್ ಗೆ ಗುರಿ ತಲುಪಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಫ್ರಾನ್ಸ್ 2:58.45 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿಯನ್ನು ಪಡೆದರೆ, ಗ್ರೇಟ್ ಬ್ರಿಟನ್ 2:58.71 ಸೆಕೆಂಡ್ ನಲ್ಲಿ ಗುರಿ ತಲುಪಿ ಕಂಚು ಪಡೆದಿದೆ.

andolanait

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

18 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

43 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago