ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಪಾರುಲ್

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ ಅತ್ಲೀಟ್ ಪಾರುಲ್ ಚೌಧರಿ ಹನ್ನೊಂದನೇ ಸ್ಥಾನ ಪಡೆದರು.

ಆದಾಗ್ಯೂ, ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪಾರುಲ್ 9:15.31 ಕ್ಕೆ ಗುರಿ ತಲುಪುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ಮುರಿದರು.

ರಾಷ್ಟ್ರೀಯ ದಾಖಲೆಯನ್ನು ಸಾಧಿಸುವ ಮೂಲಕ ಪಾರುಲ್ 2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದರು.

ಬ್ರೂನಿ ಅಥ್ಲೀಟ್ ವಿನ್ ಫ್ರೆಡ್ ಮ್ಯೂಟಿಲ್ ಯವಿ 8:54.29 ಸಮಯದೊಂದಿಗೆ ಗುರಿ ತಲುಪಿ ಚಿನ್ನದ ಪದಕವನ್ನು ಪಡೆದರು, ಕೀನ್ಯಾದ ಬೀಟ್ರಿಸ್ ಚೆಪ್ಕೋಚ್ ಅವರು ತಮ್ಮ ಋತುವಿನ ಅತ್ಯುತ್ತಮ ಸಮಯ 8:58.98 ಸೆಕೆಂಡ್ಗೆ ಗುರಿ ತಲುಪಿ ಬೆಳ್ಳಿ ಗೆದ್ದರು ಹಾಗೂ ಕೀನ್ಯಾದ ಇನ್ನೊಬ್ಬ ಅಥ್ಲೀಟ್ ಫೇಯ್ತ್ ಚೆರೊಟಿಚ್ ತಮ್ಮ ವೈಯಕ್ತಿಕ ಅತ್ಯುತ್ತಮ ಮಾರ್ಕ್ 69:00 ಗೆಲುವನ್ನು ಸಾಧಿಸಿ. ಕಂಚು ಗೆದ್ದರು.

ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4×400 ಮೀಟರ್ಸ್ ರಿಲೇ ತಂಡವು 4×400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು.

ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತ ತಂಡವು 2:59.92 ಸೆಕೆಂಡ್ ಗೆ ಗುರಿ ತಲುಪಿತು.

ಕ್ವಿನ್ಸಿ ಹಾಲ್, ವೆರ್ನಾನ್ ನಾರ್ವುಡ್, ಜಸ್ಟಿನ್ ರಾಬಿನ್ಸನ್ ಹಾಗೂ ರೈ ಬೆಂಜಮಿನ್ವಾನ್ ಅವರಿದ್ದ ಅಮೆರಿಕ ತಂಡವು 2:57.31 ಸೆಕೆಂಡ್ ಗೆ ಗುರಿ ತಲುಪಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಫ್ರಾನ್ಸ್ 2:58.45 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿಯನ್ನು ಪಡೆದರೆ, ಗ್ರೇಟ್ ಬ್ರಿಟನ್ 2:58.71 ಸೆಕೆಂಡ್ ನಲ್ಲಿ ಗುರಿ ತಲುಪಿ ಕಂಚು ಪಡೆದಿದೆ.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

5 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

5 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

5 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

5 hours ago