ಟಾಷ್ಕೆಂಟ್: ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತ ಸಣ್ಣ ಪದಕಗಳಿಗೆ ಸಮಾಧಾನಪಟ್ಟಿದೆ. ಮೊಹಮ್ಮದ್ ಹುಸ್ಸಮುದ್ದೀನ್, ದೀಪಕ್ ಕುಮಾರ್ ಭೋರಿಯಾ ಮತ್ತು ನಿಶಾಂತ್ ದೇವ್ ಕಂಚಿನ ಪದಕ ಗೆದ್ದರು.
ಇದೇ ಮೊದಲ ಸಲ ವಿಶ್ವ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸ್ಪರ್ಧೆಗೆ ಇಳಿದ ಮೊಹಮ್ಮದ್ ಹುಸ್ಸಮುದ್ದೀನ್ ಗಾಯಾಳಾಗಿ ಸೈಮಿಫೈನಲ್ ಸ್ಪರ್ಧೆಯಿಂದ ಹಿಂದೆ ಸರಿದರು. ಕ್ವಾರ್ಟರ್ ಫೈನಲ್ ದಾಟಿದ ಸಾಧನೆಯಿಂದಾಗಿ ಅವರಿಗೆ ಕಂಚಿನ ಪದಕ ಒಲಿಯಿತು.
29 ವರ್ಷದ, ನಿಜಾಮಾಬಾದ್ ಮೂಲದ ಬಾಕ್ಸರ್ ಹುಸ್ಸಮುದ್ದೀನ್ ಸೆಮಿಫೈನಲ್ನಲ್ಲಿ (57 ಕೆಜಿ ವಿಭಾಗ) ಕ್ಯೂಬಾದ ಸೈದೆಲ್ ಹೋರ್ಟ ರಾಡ್ರಿಗೆಝ್ ಡೆಲ್ ರೇ ಅವರನ್ನು ಎದುರಿಸಬೇಕಿತ್ತು. ಆದರೆ ಕ್ವಾರ್ಟರ್ ಫೈನಲ್ ವೇಳೆ ಕಾಡಿದ ಮಂಡಿನೋವಿನಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿಯಬೇಕಾಯಿತು. ಮುಂದೆ ಸ್ಪರ್ಧಿಸದಂತೆ ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಕೂಡ ಅವರಿಗೆ ಸೂಚನೆ ನೀಡಿತ್ತು.
ಇನ್ನೊಂದು ಸೆಮಿಫೈನಲ್ನಲ್ಲಿ ದೀಪಕ್ ಭೋರಿಯಾ (51 ಕೆಜಿ) ಫ್ರಾನ್ಸ್ನ ಬಿಲಾಲ್ ಬೆನ್ನಮ ವಿರುದ್ಧ 3-4 ಅಂತರದ ಸೋಲುಂಡರು. ನಿಶಾಂತ್ ದೇವ್ (71 ಕೆಜಿ) ಕಜಾಕ್ಸ್ಥಾನದ ಅಸ್ಲಾಂಬೆಕ್ ಶಿಂಬರ್ಗೆನೋವ್ ವಿರುದ್ಧ ಎಡವಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…