ಟಾಷ್ಕೆಂಟ್: ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತ ಸಣ್ಣ ಪದಕಗಳಿಗೆ ಸಮಾಧಾನಪಟ್ಟಿದೆ. ಮೊಹಮ್ಮದ್ ಹುಸ್ಸಮುದ್ದೀನ್, ದೀಪಕ್ ಕುಮಾರ್ ಭೋರಿಯಾ ಮತ್ತು ನಿಶಾಂತ್ ದೇವ್ ಕಂಚಿನ ಪದಕ ಗೆದ್ದರು.
ಇದೇ ಮೊದಲ ಸಲ ವಿಶ್ವ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸ್ಪರ್ಧೆಗೆ ಇಳಿದ ಮೊಹಮ್ಮದ್ ಹುಸ್ಸಮುದ್ದೀನ್ ಗಾಯಾಳಾಗಿ ಸೈಮಿಫೈನಲ್ ಸ್ಪರ್ಧೆಯಿಂದ ಹಿಂದೆ ಸರಿದರು. ಕ್ವಾರ್ಟರ್ ಫೈನಲ್ ದಾಟಿದ ಸಾಧನೆಯಿಂದಾಗಿ ಅವರಿಗೆ ಕಂಚಿನ ಪದಕ ಒಲಿಯಿತು.
29 ವರ್ಷದ, ನಿಜಾಮಾಬಾದ್ ಮೂಲದ ಬಾಕ್ಸರ್ ಹುಸ್ಸಮುದ್ದೀನ್ ಸೆಮಿಫೈನಲ್ನಲ್ಲಿ (57 ಕೆಜಿ ವಿಭಾಗ) ಕ್ಯೂಬಾದ ಸೈದೆಲ್ ಹೋರ್ಟ ರಾಡ್ರಿಗೆಝ್ ಡೆಲ್ ರೇ ಅವರನ್ನು ಎದುರಿಸಬೇಕಿತ್ತು. ಆದರೆ ಕ್ವಾರ್ಟರ್ ಫೈನಲ್ ವೇಳೆ ಕಾಡಿದ ಮಂಡಿನೋವಿನಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿಯಬೇಕಾಯಿತು. ಮುಂದೆ ಸ್ಪರ್ಧಿಸದಂತೆ ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಕೂಡ ಅವರಿಗೆ ಸೂಚನೆ ನೀಡಿತ್ತು.
ಇನ್ನೊಂದು ಸೆಮಿಫೈನಲ್ನಲ್ಲಿ ದೀಪಕ್ ಭೋರಿಯಾ (51 ಕೆಜಿ) ಫ್ರಾನ್ಸ್ನ ಬಿಲಾಲ್ ಬೆನ್ನಮ ವಿರುದ್ಧ 3-4 ಅಂತರದ ಸೋಲುಂಡರು. ನಿಶಾಂತ್ ದೇವ್ (71 ಕೆಜಿ) ಕಜಾಕ್ಸ್ಥಾನದ ಅಸ್ಲಾಂಬೆಕ್ ಶಿಂಬರ್ಗೆನೋವ್ ವಿರುದ್ಧ ಎಡವಿದರು.
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…