ಟಾಷ್ಕೆಂಟ್: ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತ ಸಣ್ಣ ಪದಕಗಳಿಗೆ ಸಮಾಧಾನಪಟ್ಟಿದೆ. ಮೊಹಮ್ಮದ್ ಹುಸ್ಸಮುದ್ದೀನ್, ದೀಪಕ್ ಕುಮಾರ್ ಭೋರಿಯಾ ಮತ್ತು ನಿಶಾಂತ್ ದೇವ್ ಕಂಚಿನ ಪದಕ ಗೆದ್ದರು.
ಇದೇ ಮೊದಲ ಸಲ ವಿಶ್ವ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸ್ಪರ್ಧೆಗೆ ಇಳಿದ ಮೊಹಮ್ಮದ್ ಹುಸ್ಸಮುದ್ದೀನ್ ಗಾಯಾಳಾಗಿ ಸೈಮಿಫೈನಲ್ ಸ್ಪರ್ಧೆಯಿಂದ ಹಿಂದೆ ಸರಿದರು. ಕ್ವಾರ್ಟರ್ ಫೈನಲ್ ದಾಟಿದ ಸಾಧನೆಯಿಂದಾಗಿ ಅವರಿಗೆ ಕಂಚಿನ ಪದಕ ಒಲಿಯಿತು.
29 ವರ್ಷದ, ನಿಜಾಮಾಬಾದ್ ಮೂಲದ ಬಾಕ್ಸರ್ ಹುಸ್ಸಮುದ್ದೀನ್ ಸೆಮಿಫೈನಲ್ನಲ್ಲಿ (57 ಕೆಜಿ ವಿಭಾಗ) ಕ್ಯೂಬಾದ ಸೈದೆಲ್ ಹೋರ್ಟ ರಾಡ್ರಿಗೆಝ್ ಡೆಲ್ ರೇ ಅವರನ್ನು ಎದುರಿಸಬೇಕಿತ್ತು. ಆದರೆ ಕ್ವಾರ್ಟರ್ ಫೈನಲ್ ವೇಳೆ ಕಾಡಿದ ಮಂಡಿನೋವಿನಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿಯಬೇಕಾಯಿತು. ಮುಂದೆ ಸ್ಪರ್ಧಿಸದಂತೆ ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಕೂಡ ಅವರಿಗೆ ಸೂಚನೆ ನೀಡಿತ್ತು.
ಇನ್ನೊಂದು ಸೆಮಿಫೈನಲ್ನಲ್ಲಿ ದೀಪಕ್ ಭೋರಿಯಾ (51 ಕೆಜಿ) ಫ್ರಾನ್ಸ್ನ ಬಿಲಾಲ್ ಬೆನ್ನಮ ವಿರುದ್ಧ 3-4 ಅಂತರದ ಸೋಲುಂಡರು. ನಿಶಾಂತ್ ದೇವ್ (71 ಕೆಜಿ) ಕಜಾಕ್ಸ್ಥಾನದ ಅಸ್ಲಾಂಬೆಕ್ ಶಿಂಬರ್ಗೆನೋವ್ ವಿರುದ್ಧ ಎಡವಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…