ಚೆನ್ನೈ: ಭಾರತದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಅವರು ವಿಶ್ವ ಚೆಸ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು ಇಂದು ತವರಿಗೆ ಮರಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದ ಬಳಿ ಗುಕೇಶ್ ಅವರನ್ನು ಅಭಿಮಾನಿಗಳು ಹಾಗೂ ಸ್ನೇಹಿತರು ಸೇರಿದಂತೆ ರಾಜ್ಯ ಸರ್ಕಾರದ ಅಧಿಕಾರಿಗಳು ಗುಕೇಶ್ ಅವರಿಗೆ ಹೂವಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ ಕೋರಿದರು.
ಈ ವೇಳೆ ಮಾಧ್ಯಮದವರೊಂದಿಗೆ ಖುಷಿ ಹಂಚಿಕೊಂಡ ಗುಕೇಶ್ ಅವರು, ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲ ಹಾಗೂ ಪ್ರೀತಿಯೇ ನನಗೆ ಹೆಚ್ಚಿನ ಶಕ್ತಿ ನೀಡಿತ್ತು ಎಂದು ಸಂತಸ ವ್ಯಕ್ತಪಡಿಸಿದರು.
18 ವರ್ಷ ವಯಸ್ಸಿನ ಗುಕೇಶ್ ಅವರು, ಗುರುವಾರ ನಡೆದ ಚಾಂಪಿಯನ್ ಷಿಪ್ ಪೈನಲ್ನ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದರು. ಈ ಹಿನ್ನೆಲೆಯಲ್ಲಿ 21 ಕೋಟಿ ರೂ ಬಹುಮಾನ ಮೊತ್ತದಲ್ಲಿ ಬಹುಪಾಲನ್ನು ಗುಕೇಶ್ ಪಡೆಯಲಿದ್ದಾರೆ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…