ಕ್ರೀಡೆ

ವಿಶ್ವ ಚಾಂಪಿಯನ್‌ಶಿಪ್‌ : ಮೀರಾಬಾಯಿ ಚಾನುವಿಗೆ ಬೆಳ್ಳಿ

ಬೊಗೊಟಾ: ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ, ಭಾರತದ ಹೆಮ್ಮೆಯ ಮೀರಾಬಾಯಿ ಚಾನು, ಕೊಲಂಬಿಯಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ ನಲ್ಲೂ ಬೆಳ್ಳಿ ಪದಕ ಗೆದ್ದ ಜಯಿಸಿದ್ದಾರೆ. 

49 ಕೆ.ಜಿ. ವಿಭಾಗದಲ್ಲಿ ಒಟ್ಟು 200 ಕೆ.ಜಿ ಭಾರ ಎತ್ತಿದ ಮೀರಾಬಾಯಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

ಸ್ನ್ಯಾಚ್ ವಿಭಾಗದಲ್ಲಿ 87 ಕೆ.ಜಿ ಮತ್ತು ಕ್ಲೀನ್ ಆ್ಯಂಡ್ ಜೆರ್ಕ್ ವಿಭಾಗದಲ್ಲಿ ಮೀರಾಬಾಯಿ 113 ಕೆ.ಜಿ ಭಾರ ಎತ್ತುವಲ್ಲಿ ಯಶಸ್ವಿಯಾದರು.

ಈ ವಿಭಾಗದಲ್ಲಿ ಒಟ್ಟು 206 ಕೆ.ಜಿ ಭಾರ ಎತ್ತಿದ (93 ಕೆ.ಜಿ+113 ಕೆ.ಜಿ) ಚೀನಾದ ಜಿಯಾಂಗ್ ಹುಯಿಹುವಾ, ಚಿನ್ನದ ಪದಕ ಜಯಿಸಿದರು. ಟೋಕಿಯೊ ಒಲಿಂಪಿಕ್ ಚಾಂಪಿಯನ್ ಚೀನಾದವರೇ ಆದ ಹೋವ್ ಝಿಹು ಕಂಚಿನ ಪದಕ ( ಒಟ್ಟು 198 ಕೆ.ಜಿ) ಗೆದ್ದರು.

ಮಣಿಕಟ್ಟಿನ ಗಾಯದ ಸಮಸ್ಯೆಯ ಹೊರತಾಗಿಯೂ ಪ್ರಭಾವಿ ಪ್ರದರ್ಶನ ನೀಡುವಲ್ಲಿ ಮೀರಾ ಯಶಸ್ವಿಯಾದರು. ಸೆಪ್ಟೆಂಬರ್ ತಿಂಗಳಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದರೂ ಮೀರಾ, ಅಕ್ಟೋಬರ್‌ನಲ್ಲಿ ನಡೆದ ನ್ಯಾಷನಲ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದರು.

2017ರ ಚಾಂಪಿಯನ್ ಮಿರಾಬಾಯಿ ಈಗ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಬಾರಿ ಪದಕ ಜಯಿಸಿದ್ದಾರೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago