ಕ್ರೀಡೆ

ವಿಶ್ವ ಚಾಂಪಿಯನ್‌ಶಿಪ್‌ : ಮೀರಾಬಾಯಿ ಚಾನುವಿಗೆ ಬೆಳ್ಳಿ

ಬೊಗೊಟಾ: ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ, ಭಾರತದ ಹೆಮ್ಮೆಯ ಮೀರಾಬಾಯಿ ಚಾನು, ಕೊಲಂಬಿಯಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ ನಲ್ಲೂ ಬೆಳ್ಳಿ ಪದಕ ಗೆದ್ದ ಜಯಿಸಿದ್ದಾರೆ. 

49 ಕೆ.ಜಿ. ವಿಭಾಗದಲ್ಲಿ ಒಟ್ಟು 200 ಕೆ.ಜಿ ಭಾರ ಎತ್ತಿದ ಮೀರಾಬಾಯಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

ಸ್ನ್ಯಾಚ್ ವಿಭಾಗದಲ್ಲಿ 87 ಕೆ.ಜಿ ಮತ್ತು ಕ್ಲೀನ್ ಆ್ಯಂಡ್ ಜೆರ್ಕ್ ವಿಭಾಗದಲ್ಲಿ ಮೀರಾಬಾಯಿ 113 ಕೆ.ಜಿ ಭಾರ ಎತ್ತುವಲ್ಲಿ ಯಶಸ್ವಿಯಾದರು.

ಈ ವಿಭಾಗದಲ್ಲಿ ಒಟ್ಟು 206 ಕೆ.ಜಿ ಭಾರ ಎತ್ತಿದ (93 ಕೆ.ಜಿ+113 ಕೆ.ಜಿ) ಚೀನಾದ ಜಿಯಾಂಗ್ ಹುಯಿಹುವಾ, ಚಿನ್ನದ ಪದಕ ಜಯಿಸಿದರು. ಟೋಕಿಯೊ ಒಲಿಂಪಿಕ್ ಚಾಂಪಿಯನ್ ಚೀನಾದವರೇ ಆದ ಹೋವ್ ಝಿಹು ಕಂಚಿನ ಪದಕ ( ಒಟ್ಟು 198 ಕೆ.ಜಿ) ಗೆದ್ದರು.

ಮಣಿಕಟ್ಟಿನ ಗಾಯದ ಸಮಸ್ಯೆಯ ಹೊರತಾಗಿಯೂ ಪ್ರಭಾವಿ ಪ್ರದರ್ಶನ ನೀಡುವಲ್ಲಿ ಮೀರಾ ಯಶಸ್ವಿಯಾದರು. ಸೆಪ್ಟೆಂಬರ್ ತಿಂಗಳಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದರೂ ಮೀರಾ, ಅಕ್ಟೋಬರ್‌ನಲ್ಲಿ ನಡೆದ ನ್ಯಾಷನಲ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದರು.

2017ರ ಚಾಂಪಿಯನ್ ಮಿರಾಬಾಯಿ ಈಗ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಬಾರಿ ಪದಕ ಜಯಿಸಿದ್ದಾರೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

4 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

4 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

5 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

6 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

6 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

6 hours ago