ಕ್ರೀಡೆ

ವಿಶ್ವಕಪ್‌ ಎಫೆಕ್ಟ್‌: ಯೂನಿಟ್‌ ಟೆಸ್ಟ್‌ ಮುಂದೂಡಿದ ಶಾಲೆ; ಪತ್ರ ವೈರಲ್‌

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ( ನವೆಂಬರ್‌ 19 ) ಅಹ್ಮದಾಬಾದ್‌ನ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯ ನಡೆಯಲಿದ್ದು, ಟೀಮ್‌ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟ್ರೋಫಿಗಾಗಿ ಅಂತಿಮ ಸೆಣಸಾಟ ನಡೆಸಲಿವೆ.

ಮೈದಾನದಲ್ಲಿ ಇತ್ತಂಡಗಳ ಆಟಗಾರರು ಕಣಕ್ಕಿಳಿದು ಗೆಲುವಿಗಾಗಿ ಹೇಗೆಲ್ಲಾ ಪ್ರದರ್ಶನಗಳನ್ನು ನೀಡಬೇಕೆಂಬ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದರೆ, ಟಿಕೆಟ್‌ ಖರೀದಿಸಿರುವ 132000 ಕ್ರಿಕೆಟ್‌ ಪ್ರೇಮಿಗಳು ಪಂದ್ಯ ವೀಕ್ಷಿಸಲು ಇಂದು ಮುಂಜಾನೆಯಿಂದಲೇ ಮೈದಾನದ ಮುಂದೆ ಜಮಾಯಿಸಿದ್ದಾರೆ. ಇನ್ನು ಕೋಟ್ಯಂತರ ಕ್ರಿಕೆಟ್‌ ಪ್ರಿಯರು ಮನೆಯಲ್ಲಿ ಟಿವಿ ಮುಂದೆ ಕುಳಿತು ಪಂದ್ಯವನ್ನು ಆನಂದಿಸಲು ಹಾಗೂ ಟೀಮ್‌ ಇಂಡಿಯಾಗೆ ಬೆಂಬಲಿಸಲು ಸಜ್ಜಾಗಿದ್ದಾರೆ.

ಇಂದು ಭಾನುವಾರವಿರುವ ಕಾರಣ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಇದ್ದು ಪಂದ್ಯದ ವೀಕ್ಷಕರ ಸಂಖ್ಯೆ ದೊಡ್ಡ ಮಟ್ಟದಲ್ಲಿರಲಿದೆ. ಇನ್ನು ಭಾರತದಲ್ಲಿ ಕ್ರಿಕೆಟ್‌ ಕ್ರೇಜ್‌ ಎಷ್ಟರ ಮಟ್ಟಿಗೆ ಇರಬೇಕೆಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಇಲ್ಲೊಂದು ಶಾಲೆ ವಿಶ್ವಕಪ್‌ ಸಲುವಾಗಿ ಯೂನಿಟ್‌ ಟೆಸ್ಟ್‌ ಅನ್ನು ಮುಂದೂಡುವ ಮೂಲಕ ಕ್ರಿಕೆಟ್‌ ಕ್ರೇಜ್‌ಗೆ ಕೈಗನ್ನಡಿ ಹಿಡಿದಿದೆ.

ಹೌದು, ಫರಿದಾಬಾದ್‌ನ ಡಿಎವಿ ಪಬ್ಲಿಕ್‌ ಶಾಲೆ ನಾಳೆ ನವೆಂಬರ್‌ 20ರ ಸೋಮವಾರ ಇದ್ದ ಆರನೇ ತರಗತಿಯಿಂದ 12ನೇ ತರಗತಿವರೆಗಿನ ಯೂನಿಟ್‌ ಟೆಸ್ಟ ಅನ್ನು ಮಂಗಳವಾರಕ್ಕೆ ಮುಂದೂಡಿ ಪತ್ರವೊಂದನ್ನು ಹಂಚಿಕೊಂಡಿದೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಭಾರತದಲ್ಲಿ ಕ್ರಿಕೆಟ್‌ ಒಂದು ರಿಲಿಜಿಯನ್‌ ಇದ್ದಂತೆ ಎಂದು ನೆಟ್ಟಿಗರು ಬಣ್ಣಿಸಿದ್ದಾರೆ.

ವಿಶ್ವಕಪ್‌ ಫೈನಲ್‌ ಪಂದ್ಯ ಇರುವ ಕಾರಣ ಮಕ್ಕಳು ಕ್ರಿಕೆಟ್‌ ವೀಕ್ಷಿಸಲಿದ್ದು ಯೂನಿಟ್‌ ಟೆಸ್ಟ್‌ ಅನ್ನು ಮುಂದೂಡಿದ್ದೇವೆ ಎಂದು ಬರೆದುಕೊಂಡಿರುವ ಈ ಸಂಸ್ಥೆ ಈ ಪಂದ್ಯವನ್ನು ಎಲ್ಲಾ ವಯಸ್ಸಿನವರೂ ಕುಟುಂಬ ಸಮೇತರಾಗಿ ಕುಳಿತು ವೀಕ್ಷಿಸುವುದರಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ, ಭಾರತ ಟ್ರೋಫಿಯನ್ನು ಗೆದ್ದು ಬರಲಿ ಎಂದು ಆಶಿಸುತ್ತೇವೆ ಎಂದು ಉಲ್ಲೇಖಿಸಿದೆ.

andolana

Recent Posts

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 mins ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

25 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

59 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago