ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ( ನವೆಂಬರ್ 19 ) ಅಹ್ಮದಾಬಾದ್ನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟ್ರೋಫಿಗಾಗಿ ಅಂತಿಮ ಸೆಣಸಾಟ ನಡೆಸಲಿವೆ.
ಮೈದಾನದಲ್ಲಿ ಇತ್ತಂಡಗಳ ಆಟಗಾರರು ಕಣಕ್ಕಿಳಿದು ಗೆಲುವಿಗಾಗಿ ಹೇಗೆಲ್ಲಾ ಪ್ರದರ್ಶನಗಳನ್ನು ನೀಡಬೇಕೆಂಬ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದರೆ, ಟಿಕೆಟ್ ಖರೀದಿಸಿರುವ 132000 ಕ್ರಿಕೆಟ್ ಪ್ರೇಮಿಗಳು ಪಂದ್ಯ ವೀಕ್ಷಿಸಲು ಇಂದು ಮುಂಜಾನೆಯಿಂದಲೇ ಮೈದಾನದ ಮುಂದೆ ಜಮಾಯಿಸಿದ್ದಾರೆ. ಇನ್ನು ಕೋಟ್ಯಂತರ ಕ್ರಿಕೆಟ್ ಪ್ರಿಯರು ಮನೆಯಲ್ಲಿ ಟಿವಿ ಮುಂದೆ ಕುಳಿತು ಪಂದ್ಯವನ್ನು ಆನಂದಿಸಲು ಹಾಗೂ ಟೀಮ್ ಇಂಡಿಯಾಗೆ ಬೆಂಬಲಿಸಲು ಸಜ್ಜಾಗಿದ್ದಾರೆ.
ಇಂದು ಭಾನುವಾರವಿರುವ ಕಾರಣ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಇದ್ದು ಪಂದ್ಯದ ವೀಕ್ಷಕರ ಸಂಖ್ಯೆ ದೊಡ್ಡ ಮಟ್ಟದಲ್ಲಿರಲಿದೆ. ಇನ್ನು ಭಾರತದಲ್ಲಿ ಕ್ರಿಕೆಟ್ ಕ್ರೇಜ್ ಎಷ್ಟರ ಮಟ್ಟಿಗೆ ಇರಬೇಕೆಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಇಲ್ಲೊಂದು ಶಾಲೆ ವಿಶ್ವಕಪ್ ಸಲುವಾಗಿ ಯೂನಿಟ್ ಟೆಸ್ಟ್ ಅನ್ನು ಮುಂದೂಡುವ ಮೂಲಕ ಕ್ರಿಕೆಟ್ ಕ್ರೇಜ್ಗೆ ಕೈಗನ್ನಡಿ ಹಿಡಿದಿದೆ.
ಹೌದು, ಫರಿದಾಬಾದ್ನ ಡಿಎವಿ ಪಬ್ಲಿಕ್ ಶಾಲೆ ನಾಳೆ ನವೆಂಬರ್ 20ರ ಸೋಮವಾರ ಇದ್ದ ಆರನೇ ತರಗತಿಯಿಂದ 12ನೇ ತರಗತಿವರೆಗಿನ ಯೂನಿಟ್ ಟೆಸ್ಟ ಅನ್ನು ಮಂಗಳವಾರಕ್ಕೆ ಮುಂದೂಡಿ ಪತ್ರವೊಂದನ್ನು ಹಂಚಿಕೊಂಡಿದೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರತದಲ್ಲಿ ಕ್ರಿಕೆಟ್ ಒಂದು ರಿಲಿಜಿಯನ್ ಇದ್ದಂತೆ ಎಂದು ನೆಟ್ಟಿಗರು ಬಣ್ಣಿಸಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯ ಇರುವ ಕಾರಣ ಮಕ್ಕಳು ಕ್ರಿಕೆಟ್ ವೀಕ್ಷಿಸಲಿದ್ದು ಯೂನಿಟ್ ಟೆಸ್ಟ್ ಅನ್ನು ಮುಂದೂಡಿದ್ದೇವೆ ಎಂದು ಬರೆದುಕೊಂಡಿರುವ ಈ ಸಂಸ್ಥೆ ಈ ಪಂದ್ಯವನ್ನು ಎಲ್ಲಾ ವಯಸ್ಸಿನವರೂ ಕುಟುಂಬ ಸಮೇತರಾಗಿ ಕುಳಿತು ವೀಕ್ಷಿಸುವುದರಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ, ಭಾರತ ಟ್ರೋಫಿಯನ್ನು ಗೆದ್ದು ಬರಲಿ ಎಂದು ಆಶಿಸುತ್ತೇವೆ ಎಂದು ಉಲ್ಲೇಖಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…