ಕ್ರೀಡೆ

ವಿಶ್ವಕಪ್‌ ಎಫೆಕ್ಟ್‌: ಯೂನಿಟ್‌ ಟೆಸ್ಟ್‌ ಮುಂದೂಡಿದ ಶಾಲೆ; ಪತ್ರ ವೈರಲ್‌

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ( ನವೆಂಬರ್‌ 19 ) ಅಹ್ಮದಾಬಾದ್‌ನ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯ ನಡೆಯಲಿದ್ದು, ಟೀಮ್‌ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟ್ರೋಫಿಗಾಗಿ ಅಂತಿಮ ಸೆಣಸಾಟ ನಡೆಸಲಿವೆ.

ಮೈದಾನದಲ್ಲಿ ಇತ್ತಂಡಗಳ ಆಟಗಾರರು ಕಣಕ್ಕಿಳಿದು ಗೆಲುವಿಗಾಗಿ ಹೇಗೆಲ್ಲಾ ಪ್ರದರ್ಶನಗಳನ್ನು ನೀಡಬೇಕೆಂಬ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದರೆ, ಟಿಕೆಟ್‌ ಖರೀದಿಸಿರುವ 132000 ಕ್ರಿಕೆಟ್‌ ಪ್ರೇಮಿಗಳು ಪಂದ್ಯ ವೀಕ್ಷಿಸಲು ಇಂದು ಮುಂಜಾನೆಯಿಂದಲೇ ಮೈದಾನದ ಮುಂದೆ ಜಮಾಯಿಸಿದ್ದಾರೆ. ಇನ್ನು ಕೋಟ್ಯಂತರ ಕ್ರಿಕೆಟ್‌ ಪ್ರಿಯರು ಮನೆಯಲ್ಲಿ ಟಿವಿ ಮುಂದೆ ಕುಳಿತು ಪಂದ್ಯವನ್ನು ಆನಂದಿಸಲು ಹಾಗೂ ಟೀಮ್‌ ಇಂಡಿಯಾಗೆ ಬೆಂಬಲಿಸಲು ಸಜ್ಜಾಗಿದ್ದಾರೆ.

ಇಂದು ಭಾನುವಾರವಿರುವ ಕಾರಣ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಇದ್ದು ಪಂದ್ಯದ ವೀಕ್ಷಕರ ಸಂಖ್ಯೆ ದೊಡ್ಡ ಮಟ್ಟದಲ್ಲಿರಲಿದೆ. ಇನ್ನು ಭಾರತದಲ್ಲಿ ಕ್ರಿಕೆಟ್‌ ಕ್ರೇಜ್‌ ಎಷ್ಟರ ಮಟ್ಟಿಗೆ ಇರಬೇಕೆಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಇಲ್ಲೊಂದು ಶಾಲೆ ವಿಶ್ವಕಪ್‌ ಸಲುವಾಗಿ ಯೂನಿಟ್‌ ಟೆಸ್ಟ್‌ ಅನ್ನು ಮುಂದೂಡುವ ಮೂಲಕ ಕ್ರಿಕೆಟ್‌ ಕ್ರೇಜ್‌ಗೆ ಕೈಗನ್ನಡಿ ಹಿಡಿದಿದೆ.

ಹೌದು, ಫರಿದಾಬಾದ್‌ನ ಡಿಎವಿ ಪಬ್ಲಿಕ್‌ ಶಾಲೆ ನಾಳೆ ನವೆಂಬರ್‌ 20ರ ಸೋಮವಾರ ಇದ್ದ ಆರನೇ ತರಗತಿಯಿಂದ 12ನೇ ತರಗತಿವರೆಗಿನ ಯೂನಿಟ್‌ ಟೆಸ್ಟ ಅನ್ನು ಮಂಗಳವಾರಕ್ಕೆ ಮುಂದೂಡಿ ಪತ್ರವೊಂದನ್ನು ಹಂಚಿಕೊಂಡಿದೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಭಾರತದಲ್ಲಿ ಕ್ರಿಕೆಟ್‌ ಒಂದು ರಿಲಿಜಿಯನ್‌ ಇದ್ದಂತೆ ಎಂದು ನೆಟ್ಟಿಗರು ಬಣ್ಣಿಸಿದ್ದಾರೆ.

ವಿಶ್ವಕಪ್‌ ಫೈನಲ್‌ ಪಂದ್ಯ ಇರುವ ಕಾರಣ ಮಕ್ಕಳು ಕ್ರಿಕೆಟ್‌ ವೀಕ್ಷಿಸಲಿದ್ದು ಯೂನಿಟ್‌ ಟೆಸ್ಟ್‌ ಅನ್ನು ಮುಂದೂಡಿದ್ದೇವೆ ಎಂದು ಬರೆದುಕೊಂಡಿರುವ ಈ ಸಂಸ್ಥೆ ಈ ಪಂದ್ಯವನ್ನು ಎಲ್ಲಾ ವಯಸ್ಸಿನವರೂ ಕುಟುಂಬ ಸಮೇತರಾಗಿ ಕುಳಿತು ವೀಕ್ಷಿಸುವುದರಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ, ಭಾರತ ಟ್ರೋಫಿಯನ್ನು ಗೆದ್ದು ಬರಲಿ ಎಂದು ಆಶಿಸುತ್ತೇವೆ ಎಂದು ಉಲ್ಲೇಖಿಸಿದೆ.

andolana

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

6 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

6 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

7 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

8 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

9 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

10 hours ago