ಕ್ರೀಡೆ

ವಿಶ್ವಕಪ್ 2023| ಕಿವೀಸ್‌‌ ದಾಳಿಗೆ ಮಂಕಾದ ಇಂಗ್ಲೆಂಡ್‌‌: ಟಾರ್ಗೆಟ್‌ 283

ಅಹಮದಾಬಾದ್‌ : ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್‌ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್ ಗಳು ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ ಅನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ಪರ ಜೋ ರೂಟ್‌ ಹೊರತುಪಿಡಿಸಿ ಯಾವೊಬ್ಬ ಆಟಗಾರನೂ ಸಹ ಉತ್ತಮ ಬ್ಯಾಟಿಂಗ್‌ ಮಾಡುವಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ ನಿಗದಿತ 50 ಓವರ್‌ಗೆ 9 ವಿಕೆಟ್ ನಷ್ಟಕ್ಕೆ 282 ರನ್‌ ಗಳಿಸುವ ಮೂಲಕ ನ್ಯೂಜಿಲ್ಯಾಂಡ್ ತಂಡಕ್ಕೆ 283 ರನ್‌ ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಅನುಭವಿಸಿತು. ಕೇವಲ 14 ರನ್‌ ಗಳಿಸಿ ಮ್ಯಾಟ್‌ ಹೆನ್ರಿಗೆ ಮಲಾನ್‌ ವಿಕೆಟ್‌ ಒಪ್ಪಿಸಿ ಹೊರನಡೆದರು. ಆಂಗ್ಲರ ಪರ ಜೋ ರೂಟ್‌ ಏಕಾಂಗಿಯಾಗಿ ಇನ್ನಿಂಗ್ಸ್‌ ಕಟ್ಟಿದರು. ರೂಟ್ 86 ಎಸೆತದಲ್ಲಿ 4 ಬೌಂಡರಿ ಜೊತೆ 1 ಸಿಕ್ಸ್ ಮೂಲಕ 77 ರನ್‌ ಗಳಿಸಿದರೆ, ನಾಯಕ ಜೋಸ್‌ ಬಟ್ಲರ್ 42 ಎಸೆತದಲ್ಲಿ 2 ಸಿಕ್ಸ್‌ ಮತ್ತು 22 ಬೌಂಡರಿ ಮೂಲಕ 43 ರನ್ ಸಿಡಿಸಿದರು. ಉಳಿಂದತೆ ಜಾನಿ ಬೈರ್‌ಸ್ಟೋವ್ 33 ರನ್, ಡೇವಿಡ್ ಮಲಾನ್ 14 ರನ್, ಹ್ಯಾರಿ ಬ್ರೂಕ್ 25 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 20 ರನ್, ಮೊಯೀನ್ ಅಲಿ 11 ರನ್, ಸ್ಯಾಮ್ ಕರನ್ 14 ರನ್, ಕ್ರಿಸ್ ವೋಕ್ಸ್ 11 ರನ್ ಗಳಿಸಿದರು.

ಇಂಗ್ಲೆಂಡ್‌ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ನ್ಯೂಜಿಲ್ಯಾಂಡ್ ತಂಡ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿತು. ಕಿವೀಸ್ ಪರ ಮ್ಯಾಟ್ ಹೆನ್ರಿ ಅವರು 10 ಓವರ್‌ಗೆ 48 ರನ್‌ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಆಂಗ್ಲರ ಕುಸಿತಕ್ಕೆ ಕಾರಣರಾದರು. ಉಳಿದಂತೆ ಮಿಚೆಲ್ ಸ್ಯಾಂಟ್ನರ್ 2, ಗ್ಲೆನ್ ಫಿಲಿಪ್ಸ್ 2, ರಚಿನ್ ರವೀಂದ್ರ 1 ಹಾಗೂ ಟ್ರೆಂಟ್ ಬೋಲ್ಟ್‌ ತಲಾ 1 ವಿಕೆಟ್ ಪಡೆದು ಮಿಂಚಿದರು.

andolanait

Recent Posts

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

3 mins ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

35 mins ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

48 mins ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

1 hour ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

1 hour ago

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…

1 hour ago