ಅಹಮದಾಬಾದ್ : ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್ ಗಳು ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಅನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಇಂಗ್ಲೆಂಡ್ ಪರ ಜೋ ರೂಟ್ ಹೊರತುಪಿಡಿಸಿ ಯಾವೊಬ್ಬ ಆಟಗಾರನೂ ಸಹ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ ನಿಗದಿತ 50 ಓವರ್ಗೆ 9 ವಿಕೆಟ್ ನಷ್ಟಕ್ಕೆ 282 ರನ್ ಗಳಿಸುವ ಮೂಲಕ ನ್ಯೂಜಿಲ್ಯಾಂಡ್ ತಂಡಕ್ಕೆ 283 ರನ್ ಗಳ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಅನುಭವಿಸಿತು. ಕೇವಲ 14 ರನ್ ಗಳಿಸಿ ಮ್ಯಾಟ್ ಹೆನ್ರಿಗೆ ಮಲಾನ್ ವಿಕೆಟ್ ಒಪ್ಪಿಸಿ ಹೊರನಡೆದರು. ಆಂಗ್ಲರ ಪರ ಜೋ ರೂಟ್ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದರು. ರೂಟ್ 86 ಎಸೆತದಲ್ಲಿ 4 ಬೌಂಡರಿ ಜೊತೆ 1 ಸಿಕ್ಸ್ ಮೂಲಕ 77 ರನ್ ಗಳಿಸಿದರೆ, ನಾಯಕ ಜೋಸ್ ಬಟ್ಲರ್ 42 ಎಸೆತದಲ್ಲಿ 2 ಸಿಕ್ಸ್ ಮತ್ತು 22 ಬೌಂಡರಿ ಮೂಲಕ 43 ರನ್ ಸಿಡಿಸಿದರು. ಉಳಿಂದತೆ ಜಾನಿ ಬೈರ್ಸ್ಟೋವ್ 33 ರನ್, ಡೇವಿಡ್ ಮಲಾನ್ 14 ರನ್, ಹ್ಯಾರಿ ಬ್ರೂಕ್ 25 ರನ್, ಲಿಯಾಮ್ ಲಿವಿಂಗ್ಸ್ಟೋನ್ 20 ರನ್, ಮೊಯೀನ್ ಅಲಿ 11 ರನ್, ಸ್ಯಾಮ್ ಕರನ್ 14 ರನ್, ಕ್ರಿಸ್ ವೋಕ್ಸ್ 11 ರನ್ ಗಳಿಸಿದರು.
ಇಂಗ್ಲೆಂಡ್ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ನ್ಯೂಜಿಲ್ಯಾಂಡ್ ತಂಡ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿತು. ಕಿವೀಸ್ ಪರ ಮ್ಯಾಟ್ ಹೆನ್ರಿ ಅವರು 10 ಓವರ್ಗೆ 48 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಆಂಗ್ಲರ ಕುಸಿತಕ್ಕೆ ಕಾರಣರಾದರು. ಉಳಿದಂತೆ ಮಿಚೆಲ್ ಸ್ಯಾಂಟ್ನರ್ 2, ಗ್ಲೆನ್ ಫಿಲಿಪ್ಸ್ 2, ರಚಿನ್ ರವೀಂದ್ರ 1 ಹಾಗೂ ಟ್ರೆಂಟ್ ಬೋಲ್ಟ್ ತಲಾ 1 ವಿಕೆಟ್ ಪಡೆದು ಮಿಂಚಿದರು.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…