ಕ್ರೀಡೆ

ವಿಶ್ವಕಪ್ 2023| ಕಿವೀಸ್‌‌ ದಾಳಿಗೆ ಮಂಕಾದ ಇಂಗ್ಲೆಂಡ್‌‌: ಟಾರ್ಗೆಟ್‌ 283

ಅಹಮದಾಬಾದ್‌ : ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್‌ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್ ಗಳು ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ ಅನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ಪರ ಜೋ ರೂಟ್‌ ಹೊರತುಪಿಡಿಸಿ ಯಾವೊಬ್ಬ ಆಟಗಾರನೂ ಸಹ ಉತ್ತಮ ಬ್ಯಾಟಿಂಗ್‌ ಮಾಡುವಲ್ಲಿ ಯಶಸ್ವಿಯಾಗಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ ನಿಗದಿತ 50 ಓವರ್‌ಗೆ 9 ವಿಕೆಟ್ ನಷ್ಟಕ್ಕೆ 282 ರನ್‌ ಗಳಿಸುವ ಮೂಲಕ ನ್ಯೂಜಿಲ್ಯಾಂಡ್ ತಂಡಕ್ಕೆ 283 ರನ್‌ ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಅನುಭವಿಸಿತು. ಕೇವಲ 14 ರನ್‌ ಗಳಿಸಿ ಮ್ಯಾಟ್‌ ಹೆನ್ರಿಗೆ ಮಲಾನ್‌ ವಿಕೆಟ್‌ ಒಪ್ಪಿಸಿ ಹೊರನಡೆದರು. ಆಂಗ್ಲರ ಪರ ಜೋ ರೂಟ್‌ ಏಕಾಂಗಿಯಾಗಿ ಇನ್ನಿಂಗ್ಸ್‌ ಕಟ್ಟಿದರು. ರೂಟ್ 86 ಎಸೆತದಲ್ಲಿ 4 ಬೌಂಡರಿ ಜೊತೆ 1 ಸಿಕ್ಸ್ ಮೂಲಕ 77 ರನ್‌ ಗಳಿಸಿದರೆ, ನಾಯಕ ಜೋಸ್‌ ಬಟ್ಲರ್ 42 ಎಸೆತದಲ್ಲಿ 2 ಸಿಕ್ಸ್‌ ಮತ್ತು 22 ಬೌಂಡರಿ ಮೂಲಕ 43 ರನ್ ಸಿಡಿಸಿದರು. ಉಳಿಂದತೆ ಜಾನಿ ಬೈರ್‌ಸ್ಟೋವ್ 33 ರನ್, ಡೇವಿಡ್ ಮಲಾನ್ 14 ರನ್, ಹ್ಯಾರಿ ಬ್ರೂಕ್ 25 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 20 ರನ್, ಮೊಯೀನ್ ಅಲಿ 11 ರನ್, ಸ್ಯಾಮ್ ಕರನ್ 14 ರನ್, ಕ್ರಿಸ್ ವೋಕ್ಸ್ 11 ರನ್ ಗಳಿಸಿದರು.

ಇಂಗ್ಲೆಂಡ್‌ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ನ್ಯೂಜಿಲ್ಯಾಂಡ್ ತಂಡ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿತು. ಕಿವೀಸ್ ಪರ ಮ್ಯಾಟ್ ಹೆನ್ರಿ ಅವರು 10 ಓವರ್‌ಗೆ 48 ರನ್‌ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಆಂಗ್ಲರ ಕುಸಿತಕ್ಕೆ ಕಾರಣರಾದರು. ಉಳಿದಂತೆ ಮಿಚೆಲ್ ಸ್ಯಾಂಟ್ನರ್ 2, ಗ್ಲೆನ್ ಫಿಲಿಪ್ಸ್ 2, ರಚಿನ್ ರವೀಂದ್ರ 1 ಹಾಗೂ ಟ್ರೆಂಟ್ ಬೋಲ್ಟ್‌ ತಲಾ 1 ವಿಕೆಟ್ ಪಡೆದು ಮಿಂಚಿದರು.

andolanait

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

55 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

57 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

59 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

1 hour ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago