ಕ್ರೀಡೆ

ಇಲ್ಲಿಯವರೆಗೂ ನಡೆದಿರುವ ಎಲ್ಲಾ ವಿಶ್ವಕಪ್‌ಗಳ ವಿನ್ನರ್‌ ಹಾಗೂ ರನ್ನರ್‌ ಅಪ್‌ ತಂಡಗಳ ಪಟ್ಟಿ

ವಿಶ್ವದಾದ್ಯಂತ ಇರುವ ಕ್ರಿಕೆಟ್‌ ಪ್ರೇಮಿಗಳು ಕಾತರತೆಯಿಂದ ಕಾಯುತ್ತಿದ್ದ ದಿನ ಹತ್ತಿರ ಬಂದೇ ಬಿಟ್ಟಿದೆ. ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ನಾಳೆ ಮಧ್ಯಾಹ್ನ ಎರಡು ಗಂಟೆಗೆ ಶುರುವಾಗಲಿದ್ದು 13ನೇ ವಿಶ್ವಕಪ್‌ ಟ್ರೋಫಿಯನ್ನು ಯಾವ ತಂಡ ಎತ್ತಿ ಹಿಡಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿಯುವತ್ತ ಚಿತ್ತ ನೆಟ್ಟಿದ್ದು, ಟೀಮ್‌ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಎನಿಸಿಕೊಳ್ಳುವ ಯೋಜನೆಯಲ್ಲಿದೆ. ಹಾಗಿದ್ದರೆ ಇಲ್ಲಿಯವರೆಗೆ ನಡೆದಿರುವ ಒಟ್ಟು 12 ವಿಶ್ವಕಪ್‌ ಟೂರ್ನಿಯಲ್ಲಿ ಯಾವ ತಂಡಗಳು ಚಾಂಪಿಯನ್‌ ಆಗಿ ಹೊರಹೊಮ್ಮಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1975 – ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಆಸ್ಟ್ರೇಲಿಯಾ

1979- ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಇಂಗ್ಲೆಂಡ್‌

1983 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಭಾರತ, ರನ್ನರ್‌ – ವೆಸ್ಟ್‌ ಇಂಡೀಸ್‌

1987 – ಆತಿಥ್ಯ – ಭಾರತ ಹಾಗೂ ಪಾಕಿಸ್ತಾನ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಇಂಗ್ಲೆಂಡ್‌

1992 – ಆತಿಥ್ಯ – ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ, ವಿನ್ನರ್‌ – ಪಾಕಿಸ್ತಾನ, ರನ್ನರ್‌ – ಇಂಗ್ಲೆಂಡ್‌

1996 – ಆತಿಥ್ಯ – ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ, ವಿನ್ನರ್‌ – ಶ್ರೀಲಂಕಾ, ರನ್ನರ್‌ – ಆಸ್ಟ್ರೇಲಿಯಾ

1999 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಪಾಕಿಸ್ತಾನ

2003 – ಆತಿಥ್ಯ – ದಕ್ಷಿಣ ಆಫ್ರಿಕಾ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಭಾರತ

2007 – ಆತಿಥ್ಯ – ವೆಸ್ಟ್‌ ಇಂಡೀಸ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಶ್ರೀಲಂಕಾ

2011 – ಆತಿಥ್ಯ – ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ವಿನ್ನರ್‌ – ಭಾರತ, ರನ್ನರ್‌ – ಶ್ರೀಲಂಕಾ

2015 – ಆತಿಥ್ಯ – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ನ್ಯೂಜಿಲೆಂಡ್‌

2019 – ಆತಿಥ್ಯ – ಇಂಗ್ಲೆಂಡ್ಸ್‌ ಹಾಗೂ ವೇಲ್ಸ್‌, ವಿನ್ನರ್‌ – ಇಂಗ್ಲೆಂಡ್‌, ರನ್ನರ್‌ – ನ್ಯೂಜಿಲೆಂಡ್‌

andolana

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

2 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

2 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

2 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

4 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago