ಕ್ರೀಡೆ

ಇಲ್ಲಿಯವರೆಗೂ ನಡೆದಿರುವ ಎಲ್ಲಾ ವಿಶ್ವಕಪ್‌ಗಳ ವಿನ್ನರ್‌ ಹಾಗೂ ರನ್ನರ್‌ ಅಪ್‌ ತಂಡಗಳ ಪಟ್ಟಿ

ವಿಶ್ವದಾದ್ಯಂತ ಇರುವ ಕ್ರಿಕೆಟ್‌ ಪ್ರೇಮಿಗಳು ಕಾತರತೆಯಿಂದ ಕಾಯುತ್ತಿದ್ದ ದಿನ ಹತ್ತಿರ ಬಂದೇ ಬಿಟ್ಟಿದೆ. ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ನಾಳೆ ಮಧ್ಯಾಹ್ನ ಎರಡು ಗಂಟೆಗೆ ಶುರುವಾಗಲಿದ್ದು 13ನೇ ವಿಶ್ವಕಪ್‌ ಟ್ರೋಫಿಯನ್ನು ಯಾವ ತಂಡ ಎತ್ತಿ ಹಿಡಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿಯುವತ್ತ ಚಿತ್ತ ನೆಟ್ಟಿದ್ದು, ಟೀಮ್‌ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಎನಿಸಿಕೊಳ್ಳುವ ಯೋಜನೆಯಲ್ಲಿದೆ. ಹಾಗಿದ್ದರೆ ಇಲ್ಲಿಯವರೆಗೆ ನಡೆದಿರುವ ಒಟ್ಟು 12 ವಿಶ್ವಕಪ್‌ ಟೂರ್ನಿಯಲ್ಲಿ ಯಾವ ತಂಡಗಳು ಚಾಂಪಿಯನ್‌ ಆಗಿ ಹೊರಹೊಮ್ಮಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1975 – ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಆಸ್ಟ್ರೇಲಿಯಾ

1979- ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಇಂಗ್ಲೆಂಡ್‌

1983 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಭಾರತ, ರನ್ನರ್‌ – ವೆಸ್ಟ್‌ ಇಂಡೀಸ್‌

1987 – ಆತಿಥ್ಯ – ಭಾರತ ಹಾಗೂ ಪಾಕಿಸ್ತಾನ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಇಂಗ್ಲೆಂಡ್‌

1992 – ಆತಿಥ್ಯ – ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ, ವಿನ್ನರ್‌ – ಪಾಕಿಸ್ತಾನ, ರನ್ನರ್‌ – ಇಂಗ್ಲೆಂಡ್‌

1996 – ಆತಿಥ್ಯ – ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ, ವಿನ್ನರ್‌ – ಶ್ರೀಲಂಕಾ, ರನ್ನರ್‌ – ಆಸ್ಟ್ರೇಲಿಯಾ

1999 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಪಾಕಿಸ್ತಾನ

2003 – ಆತಿಥ್ಯ – ದಕ್ಷಿಣ ಆಫ್ರಿಕಾ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಭಾರತ

2007 – ಆತಿಥ್ಯ – ವೆಸ್ಟ್‌ ಇಂಡೀಸ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಶ್ರೀಲಂಕಾ

2011 – ಆತಿಥ್ಯ – ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ವಿನ್ನರ್‌ – ಭಾರತ, ರನ್ನರ್‌ – ಶ್ರೀಲಂಕಾ

2015 – ಆತಿಥ್ಯ – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ನ್ಯೂಜಿಲೆಂಡ್‌

2019 – ಆತಿಥ್ಯ – ಇಂಗ್ಲೆಂಡ್ಸ್‌ ಹಾಗೂ ವೇಲ್ಸ್‌, ವಿನ್ನರ್‌ – ಇಂಗ್ಲೆಂಡ್‌, ರನ್ನರ್‌ – ನ್ಯೂಜಿಲೆಂಡ್‌

andolana

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

1 min ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

24 mins ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

1 hour ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

2 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

2 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

3 hours ago