ಕ್ರೀಡೆ

ಇಲ್ಲಿಯವರೆಗೂ ನಡೆದಿರುವ ಎಲ್ಲಾ ವಿಶ್ವಕಪ್‌ಗಳ ವಿನ್ನರ್‌ ಹಾಗೂ ರನ್ನರ್‌ ಅಪ್‌ ತಂಡಗಳ ಪಟ್ಟಿ

ವಿಶ್ವದಾದ್ಯಂತ ಇರುವ ಕ್ರಿಕೆಟ್‌ ಪ್ರೇಮಿಗಳು ಕಾತರತೆಯಿಂದ ಕಾಯುತ್ತಿದ್ದ ದಿನ ಹತ್ತಿರ ಬಂದೇ ಬಿಟ್ಟಿದೆ. ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ನಾಳೆ ಮಧ್ಯಾಹ್ನ ಎರಡು ಗಂಟೆಗೆ ಶುರುವಾಗಲಿದ್ದು 13ನೇ ವಿಶ್ವಕಪ್‌ ಟ್ರೋಫಿಯನ್ನು ಯಾವ ತಂಡ ಎತ್ತಿ ಹಿಡಿಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿಯುವತ್ತ ಚಿತ್ತ ನೆಟ್ಟಿದ್ದು, ಟೀಮ್‌ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಎನಿಸಿಕೊಳ್ಳುವ ಯೋಜನೆಯಲ್ಲಿದೆ. ಹಾಗಿದ್ದರೆ ಇಲ್ಲಿಯವರೆಗೆ ನಡೆದಿರುವ ಒಟ್ಟು 12 ವಿಶ್ವಕಪ್‌ ಟೂರ್ನಿಯಲ್ಲಿ ಯಾವ ತಂಡಗಳು ಚಾಂಪಿಯನ್‌ ಆಗಿ ಹೊರಹೊಮ್ಮಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1975 – ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಆಸ್ಟ್ರೇಲಿಯಾ

1979- ಆತಿಥ್ಯ: ಇಂಗ್ಲೆಂಡ್‌, ವಿನ್ನರ್‌: ವೆಸ್ಟ್‌ ಇಂಡೀಸ್‌, ರನ್ನರ್‌ – ಇಂಗ್ಲೆಂಡ್‌

1983 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಭಾರತ, ರನ್ನರ್‌ – ವೆಸ್ಟ್‌ ಇಂಡೀಸ್‌

1987 – ಆತಿಥ್ಯ – ಭಾರತ ಹಾಗೂ ಪಾಕಿಸ್ತಾನ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಇಂಗ್ಲೆಂಡ್‌

1992 – ಆತಿಥ್ಯ – ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ, ವಿನ್ನರ್‌ – ಪಾಕಿಸ್ತಾನ, ರನ್ನರ್‌ – ಇಂಗ್ಲೆಂಡ್‌

1996 – ಆತಿಥ್ಯ – ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ, ವಿನ್ನರ್‌ – ಶ್ರೀಲಂಕಾ, ರನ್ನರ್‌ – ಆಸ್ಟ್ರೇಲಿಯಾ

1999 – ಆತಿಥ್ಯ – ಇಂಗ್ಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಪಾಕಿಸ್ತಾನ

2003 – ಆತಿಥ್ಯ – ದಕ್ಷಿಣ ಆಫ್ರಿಕಾ, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಭಾರತ

2007 – ಆತಿಥ್ಯ – ವೆಸ್ಟ್‌ ಇಂಡೀಸ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ಶ್ರೀಲಂಕಾ

2011 – ಆತಿಥ್ಯ – ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ವಿನ್ನರ್‌ – ಭಾರತ, ರನ್ನರ್‌ – ಶ್ರೀಲಂಕಾ

2015 – ಆತಿಥ್ಯ – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ವಿನ್ನರ್‌ – ಆಸ್ಟ್ರೇಲಿಯಾ, ರನ್ನರ್‌ – ನ್ಯೂಜಿಲೆಂಡ್‌

2019 – ಆತಿಥ್ಯ – ಇಂಗ್ಲೆಂಡ್ಸ್‌ ಹಾಗೂ ವೇಲ್ಸ್‌, ವಿನ್ನರ್‌ – ಇಂಗ್ಲೆಂಡ್‌, ರನ್ನರ್‌ – ನ್ಯೂಜಿಲೆಂಡ್‌

andolana

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

2 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

5 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

6 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

7 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

7 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

12 hours ago