ಕ್ರೀಡೆ

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಆಟಗಾರರು ನಿರ್ಮಿಸಿದ ದಾಖಲೆಗಳ ಪಟ್ಟಿ

ನಿನ್ನೆ ( ನವೆಂಬರ್‌ 15 ) ನಡೆದ ಸಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡದ ವಿರುದ್ಧ 70 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದ ಟೀಮ್‌ ಇಂಡಿಯಾ ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇಂದು ( ನವೆಂಬರ್‌ 16 ) ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಸಮಿಫೈನಲ್‌ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆಯೋ ಆ ತಂಡ ಭಾರತದ ಜತೆ ಭಾನುವಾರ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.

ಹೀಗೆ ಯಶಸ್ವಿಯಾಗಿ ಫೈನಲ್‌ ತಲುಪಿರುವ ಟೀಮ್‌ ಇಂಡಿಯಾ ಪರ ಯಾವ ಆಟಗಾರರು ಈ ಬಾರಿಯ ವಿಶ್ವಕಪ್‌ ಟೂರ್ನಿಯಲ್ಲಿ ಯಾವ ದಾಖಲೆಗಳನ್ನು ಮಾಡಿದ್ದಾರೆ ಎಂಬ ದಾಖಲೆ ಈ ಕೆಳಕಂಡಂತಿದೆ.

ರೋಹಿತ್‌ ಶರ್ಮಾ ( ನಾಯಕ ) – ಬಲಗೈ ಬ್ಯಾಟ್ಸ್‌ಮನ್‌ – 36 ವರ್ಷ
ಪಂದ್ಯ : 10
ರನ್‌ : 550
ಶತಕ : 1
ಅರ್ಧಶತಕ : 3
ದಾಖಲೆ : ಏಕದಿನ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಒಟ್ಟು 51 ಸಿಕ್ಸರ್‌ ಬಾರಿಸಿರುವ ಹಿಟ್‌ಮ್ಯಾನ್‌ ವಿಶ್ವಕಪ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ ಬಾರಿಸಿರುವ ಆಟಗಾರ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

ಶುಬ್‌ಮನ್‌ ಗಿಲ್‌ – ಬಲಗೈ ಬ್ಯಾಟ್ಸ್‌ಮನ್‌ – 24 ವರ್ಷ
ಪಂದ್ಯ : 8
ರನ್‌ : 350
ಅರ್ಧಶತಕ : 4

ವಿರಾಟ್‌ ಕೊಹ್ಲಿ – ಬಲಗೈ ಬ್ಯಾಟ್ಸ್‌ಮನ್‌ – 35 ವರ್ಷ
ಪಂದ್ಯ : 10
ರನ್‌ : 711
ಶತಕ: 3
ಅರ್ಧಶತಕ : 5
ದಾಖಲೆ : ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. 711 ರನ್‌ಗಳನ್ನು ಈ ಆವೃತ್ತಿಯ ವಿಶ್ವಕಪ್‌ನಲ್ಲಿ ಬಾರಿಸಿರುವ ಕೊಹ್ಲಿ ವಿಶ್ವಕಪ್‌ ಸೀಸನ್‌ ಒಂದರಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಬಾರಿ 50+ ರನ್‌ ಬಾರಿಸಿದ ಆಟಗಾರ ಎಂಬ ದಾಖಲೆಯನ್ನೂ ಸಹ ಕೊಹ್ಲಿ ಮಾಡಿದ್ದಾರೆ. ಕೊಹ್ಲಿ ಈ ಬಾರಿ ಒಟ್ಟು 8 ಬಾರಿ 50+ ರನ್‌ ಬಾರಿಸಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಕೊಹ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಶ್ರೇಯಸ್‌ ಅಯ್ಯರ್‌ – ಬಲಗೈ ಬ್ಯಾಟ್ಸ್‌ಮನ್‌ – 28 ವರ್ಷ
ಪಂದ್ಯ : 10
ರನ್‌ : 526
ಶತಕ : 2
ಅರ್ಧಶತಕ : 3
ದಾಖಲೆ: ಶ್ರೇಯಸ್‌ ಅಯ್ಯರ್‌ ವಿಶ್ವಕಪ್‌ ಆವೃತ್ತಿಯೊಂದರಲ್ಲಿ 500 ಕ್ಕಿಂತ ಹೆಚ್ಚು ರನ್‌ ಬಾರಿಸಿದ ವಿಶ್ವದ ಮೊದಲ ಮಧ್ಯಮ ಕ್ರಮಾಂಕದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 67 ಎಸೆತಗಳಿಗೆ ಶತಕವನ್ನು ಪೂರೈಸಿದ ಅಯ್ಯರ್‌ ವಿಶ್ವಕಪ್‌ ನಾಕ್‌ಔಟ್‌ ಪಂದ್ಯಗಳಲ್ಲಿ ಅತಿವೇಗದ ಶತಕ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಸತತವಾಗಿ ಎರಡು ಶತಕಗಳನ್ನು ಬಾರಿಸಿದ ಮೂರನೇ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ.

ಕೆಎಲ್‌ ರಾಹುಲ್‌ – ಬಲಗೈ ಬ್ಯಾಟ್ಸ್‌ಮನ್‌, ವಿಕೆಟ್‌ ಕೀಪರ್‌ – 31 ವರ್ಷ
ಪಂದ್ಯ : 10 ( 9 ಇನ್ನಿಂಗ್ಸ್‌ )
ರನ್‌ : 386
ಶತಕ : 1
ಅರ್ಧಶತಕ : 1
ದಾಖಲೆ: ನೆದರ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಿಗೆ ಶತಕ ಬಾರಿಸಿದ ಕೆಎಲ್‌ ರಾಹುಲ್‌ ವಿಶ್ವಕಪ್‌ನಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ನಿರ್ಮಿಸಿದರು. ಅಲ್ಲದೇ ವಿಶ್ವಕಪ್‌ನಲ್ಲಿ ರಾಹುಲ್‌ ದ್ರಾವಿಡ್‌ ಬಳಿಕ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್‌ ಕೀಪರ್‌ ಎಂಬ ಸಾಧನೆಯನ್ನೂ ಸಹ ಮಾಡಿದರು.

ಸೂರ್ಯಕುಮಾರ್‌ ಯಾದವ್‌ – ಬಲಗೈ ಬ್ಯಾಟ್ಸ್‌ಮನ್‌ – 33 ವರ್ಷ
ಪಂದ್ಯ : 6
ರನ್‌ : 88

ರವೀಂದ್ರ ಜಡೇಜಾ – ಎಡಗೈ ಆಲ್‌ರೈಂಡರ್‌ – 34 ವರ್ಷ
ಪಂದ್ಯ : 10 ( 4 ಇನ್ನಿಂಗ್ಸ್‌ ) ವಿಕೆಟ್‌ : 16
ರನ್‌ : 111

ಮೊಹಮ್ಮದ್‌ ಶಮಿ – ಬಲಗೈ ವೇಗಿ – 33 ವರ್ಷ
ಪಂದ್ಯ : 6
ವಿಕೆಟ್‌ : 23
ದಾಖಲೆ: ಶಮಿ ವಿಶ್ವಕಪ್‌ನಲ್ಲಿ ಅತಿವೇಗವಾಗಿ 50 ವಿಕೆಟ್‌ ಪಡೆದ ವೇಗಿ ಎಂಬ ದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಭಾರತೀಯ ಎನಿಸಿಕೊಂಡಿದ್ದಾರೆ. ಇನ್ನು ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಭಾರತೀಯ ಬೌಲರ್‌ ಎಂಬ ದಾಖಲೆಯನ್ನು ಶಮಿ ಮಾಡಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ನಾಲ್ಕು ಬಾರಿ 5 ವಿಕೆಟ್‌ ಗೊಂಚಲು ಪಡೆದಿರುವ ಶಮಿ ಅತಿಹೆಚ್ಚು ಬಾರಿ 5 ವಿಕೆಟ್‌ಗಳ ಗೊಂಚಲನ್ನು ಪಡೆದ ಬೌಲರ್‌ ಎಂಬ ದಾಖಲೆ ಬರೆದಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಶಮಿ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಜಸ್‌ಪ್ರೀತ್ ಬುಮ್ರಾ – ಬಲಗೈ ವೇಗಿ – 29 ವರ್ಷ
ಪಂದ್ಯ : 10
ವಿಕೆಟ್‌ : 18

ಕುಲ್‌ದೀಪ್‌ ಯಾದವ್‌ – ಎಡಗೈ ಸ್ಪಿನ್ನರ್‌ – 28 ವರ್ಷ
ಪಂದ್ಯ : 10
ವಿಕೆಟ್‌ : 15

ಮೊಹಮ್ಮದ್‌ ಸಿರಾಜ್‌ – ಬಲಗೈ ವೇಗಿ – 29 ವರ್ಷ
ಪಂದ್ಯ : 10
ವಿಕೆಟ್‌ : 13

andolana

Recent Posts

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

42 mins ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

5 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

6 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

7 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

8 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

8 hours ago