ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ಗಾಗಿ ಪಾಕಿಸ್ತಾನ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಪಾಕ್ ಸರ್ಕಾರ ಪಾಕ್ ತಂಡಕ್ಕೆ ಭಾರತ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿಂದೆ ಪಾಕಿಸ್ತಾನ ವಿಶ್ವಕಪ್ಗಾಗಿ ಭಾರತಕ್ಕೆ ಬರುತ್ತದೆಯೇ ಅಥವಾ ಇಲ್ಲವೇ ಎಂಬ ಅನೇಕ ಊಹಾಪೋಹಗಳು ಇದ್ದವು. ವಿಶ್ವಕಪ್ಗೆ ಸಂಬಂಧಿಸಿದಂತೆ ಪಾಕಿಸ್ತಾನ ತಂಡದ ಪಂದ್ಯಗಳ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ.
ಕ್ರೀಡೆಯನ್ನು ರಾಜಕೀಯದಿಂದ ಪ್ರತ್ಯೇಕವಾಗಿಡಬೇಕು ಎಂಬುದನ್ನು ಪಾಕಿಸ್ತಾನ ಯಾವಾಗಲೂ ನಂಬುತ್ತದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಹೀಗಾಗಿ ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ತಂಡವನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.
ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಯು ಅಂತಾರಾಷ್ಟ್ರೀಯ ಕ್ರೀಡೆಗಳಿಗೆ ಸಂಬಂಧಿಸಿದ ಪಾಕಿಸ್ತಾನದ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಅಡ್ಡಿಯಾಗಬಾರದು ಎಂದು ಪಾಕಿಸ್ತಾನ ನಂಬುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಆದಾಗ್ಯೂ, ತಂಡದ ಭದ್ರತೆಯ ಬಗ್ಗೆ ತನಗೆ ತೀವ್ರ ಕಳವಳವಿದೆ. ಅದನ್ನು ಐಸಿಸಿ ಮತ್ತು ಭಾರತೀಯ ಮಂಡಳಿಗೆ ತಿಳಿಸುವುದಾಗಿ ಸಚಿವಾಲಯ ಹೇಳಿದೆ. ‘ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಭಾರತದಲ್ಲಿ ಸಂಪೂರ್ಣ ಭದ್ರತೆ ಒದಗಿಸಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ಅದು ಹೇಳಿದೆ.
ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡದ ವೇಳಾಪಟ್ಟಿ
ಪಾಕಿಸ್ತಾನ ಕ್ರಿಕೆಟ್ ತಂಡ ODI ವಿಶ್ವಕಪ್ನಲ್ಲಿ ತನ್ನ ಮೊದಲ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 6ರಂದು ಆಡಲಿದೆ. ಎರಡನೇ ಪಂದ್ಯಕ್ಕಾಗಿ ಶ್ರೀಲಂಕಾ ವಿರುದ್ಧ ಅಕ್ಟೋಬರ್ 12ರಂದು ತಂಡವು ಮೈದಾನಕ್ಕಿಳಿಯಲಿದೆ. ಅದೇ ಸಮಯದಲ್ಲಿ, ಅವರ ಮೂರನೇ ಪಂದ್ಯವು ಅಕ್ಟೋಬರ್ 14 ರಂದು ಭಾರತದ ವಿರುದ್ಧ ನಡೆಯಲಿದೆ.
ಇದಲ್ಲದೆ, ಅವರು ಅಕ್ಟೋಬರ್ 20ರಂದು ಆಸ್ಟ್ರೇಲಿಯಾವನ್ನು ಎದುರಿಸಲಿದ್ದು, ಅದಾದ ನಂತರದ ಪಂದ್ಯ ಅಕ್ಟೋಬರ್ 23 ರಂದು ಅಫ್ಘಾನಿಸ್ತಾನದೊಂದಿಗೆ ನಡೆಯಲಿದೆ. ಮತ್ತೊಂದೆಡೆ, ಅಕ್ಟೋಬರ್ 27 ರಂದು ಪಾಕಿಸ್ತಾನವು ದಕ್ಷಿಣ ಆಫ್ರಿಕಾದೊಂದಿಗೆ ಪೈಪೋಟಿ ನಡೆಸಲಿದೆ. ಇದಲ್ಲದೇ ಅಕ್ಟೋಬರ್ 31ರಂದು ಪಾಕಿಸ್ತಾನ ತಂಡ ಬಾಂಗ್ಲಾದೇಶದೊಂದಿಗೆ ಸೆಣಸಲಿದೆ. ಟೂರ್ನಿಯಲ್ಲಿ ಪಾಕಿಸ್ತಾನ ತಂಡ ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಅದೇ ಸಮಯದಲ್ಲಿ, ಅವರ ಕೊನೆಯ ಲೀಗ್ ಪಂದ್ಯವು ನವೆಂಬರ್ 12 ರಂದು ಇಂಗ್ಲೆಂಡ್ ವಿರುದ್ಧ ನಡೆಯಲಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…