ಕ್ರೀಡೆ

ಅಂದು ಕಣ್ಣಲ್ಲಿ ನೀರು, ಮನೆ ಮೇಲೆ ಕಲ್ಲು; ದ್ರಾವಿಡ್‌ ಎಂಬ ದ್ರೋಣಾಚಾರ್ಯನಿಗೀಗ ಪ್ರತೀಕಾರದ ಸಮಯ

ಅದು 2007ರ ವಿಶ್ವಕಪ್‌ನ ಟೂರ್ನಿ. ಟೀಮ್‌ ಇಂಡಿಯಾ ಕರ್ನಾಟಕದ ಆಟಗಾರ ರಾಹುಲ್‌ ದ್ರಾವಿಡ್‌ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಆದರೆ ಭಾರತ ತಂಡ ನಿರೀಕ್ಷಿಸಿದ ಪ್ರದರ್ಶನ ನೀಡಲಾಗದೇ ಟೂರ್ನಿಯಿಂದ ಗ್ರೂಪ್‌ ಹಂತದಲ್ಲಿಯೇ ಹೊರಬಿದ್ದಿತ್ತು. ಗ್ರೂಪ್‌ ಹಂತದಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿ ನೆಲಕಚ್ಚಿದ್ದ ತನ್ನ ತಂಡವನ್ನು ಕಂಡು ನಾಯಕ ದ್ರಾವಿಡ್‌ ಮೈದಾನದಲ್ಲಿಯೇ ಕಣ್ಣೀರು ಹಾಕಿದ್ದರು.

ಅಷ್ಟೇ ಅಲ್ಲದೇ ಬೆಂಗಳೂರಿನ ರಾಹುಲ್‌ ದ್ರಾವಿಡ್‌ ನಿವಾಸದ ಮೇಲೆ ಕಲ್ಲು ಎಸೆಯುವ ಮೂಲಕ ಕಿಡಿಗೇಡಿಗಳು ವಿಶ್ವಕಪ್‌ ಸೋಲಿನ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಹೀಗೆ ಅಂದು ನಾಯಕನಾಗಿ ತೀವ್ರ ಮುಖಭಂಗ ಅನುಭವಿಸಿದ್ದ ರಾಹುಲ್‌ ದ್ರಾವಿಡ್‌ ಈಗ ಕೋಚ್‌ ಆಗಿ ವಿಶ್ವಕಪ್‌ ಎತ್ತಿ ಹಿಡಿಯುವ ಸನಿಹಕ್ಕೆ ಬಂದು ತಲುಪಿದ್ದಾರೆ.

ಹೌದು, ರವಿಶಾಸ್ತ್ರಿ ಬಳಿಕ ಭಾರತ ತಂಡದ ಕೋಚ್‌ ಆಗಿ ಆಯ್ಕೆಯಾದ ದ್ರಾವಿಡ್‌ ಸದ್ಯ ತಂಡವನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ತಾವು ಕೋಚ್‌ ಆಗಿ ಆಯ್ಕೆಯಾದಾಗ ಇದು ತಪ್ಪಾದ ಆಯ್ಕೆ, ದ್ರಾವಿಡ್‌ ಕೋಚ್‌ ಆಗಲು ಅಸಮರ್ಥರು ಎಂದು ಕಾಮೆಂಟ್‌ ಮಾಡಿದ್ದವರ ಬಾಯನ್ನು ಮುಚ್ಚಿಸಿದ್ದಾರೆ.

ಸ್ವತಃ ನಾಯಕ ರೋಹಿತ್‌ ಶರ್ಮಾ ಅವರೇ ರಾಹುಲ್‌ ದ್ರಾವಿಡ್‌ ಗಾಯದಿಂದ ಚೇತರಿಸಿಕೊಂಡು ತಂಡ ಸೇರಿದ ಆಟಗಾರರಿಗೆ ಸ್ವತಂತ್ರ ಕೊಟ್ಟು ಹೆಚ್ಚೇನೂ ಬದಲಾವಣೆ ಮಾಡದೇ ತಂಡವನ್ನು ಸಿದ್ಧಪಡಿಸಿದ್ದೇ ಯಶಸ್ಸಿಗೆ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಹೌದು, ರಾಹುಲ್‌ ದ್ರಾವಿಡ್‌ ಗಾಯದಿಂದ ಚೇತರಿಸಿಕೊಂಡು ತಂಡ ಸೇರಿದ ಶ್ರೇಯಸ್‌ ಐಯ್ಯರ್‌ ಹಾಗೂ ಕೆಎಲ್‌ ರಾಹುಲ್‌ಗೆ ತಂಡದಲ್ಲಿ ಸ್ಥಾನ ನೀಡಿದ್ದು ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಈ ಮಟ್ಟ ತಲುಪಲು ಪ್ರಮುಖ ಕಾರಣವಾಗಿದೆ.

ಈ ಹಿಂದಿನ ವಿಶ್ವಕಪ್‌ಗಳ ಹಾಗೆ ಹೆಚ್ಚು ಪಂದ್ಯ ಆಡಿ ಅನುಭವಿಗಳು ಎನಿಸಿಕೊಂಡವರಿಗೆ ಹೆಚ್ಚಾಗಿ ಮಣೆ ಹಾಕದ ರಾಹುಲ್‌ ದ್ರಾವಿಡ್‌ ಸಮರ್ಥವಾಗಿ ಆಡಬಲ್ಲ ಆಟಗಾರರನ್ನು ಮೈದಾನಕ್ಕೆ ಇಳಿಸಿ ಜಾಣ್ಮೆ ಮೆರೆದಿದ್ದಾರೆ. ಇದು ಸಾಧ್ಯವಾಗಿದ್ದು ಏಕಕಾಲಕ್ಕೆ ಎರಡೆರಡು ಅಂತರರಾಷ್ಟ್ರೀಯ ತಂಡಗಳನ್ನು ರಾಹುಲ್‌ ದ್ರಾವಿಡ್‌ ರಚಿಸಿ ಪಂದ್ಯಗಳನ್ನು ಆಡಿಸಿದ್ದು. ಹೀಗೆ ತಾನು ಕೋಚ್‌ ಆದಾಗಿನಿಂದ ಇಲ್ಲಿಯವರೆಗೂ ಬಹುತೇಕ ಆಟಗಾರರಿಗೆ ಆಡುವ ಅವಕಾಶ ನೀಡಿದ್ದರಿಂದಲೇ ಇಂದು ವಿಶ್ವಕಪ್‌ನಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆಲ್ಲುವಂತ ಸಮರ್ಥ ಟೀಮ್‌ ಇಂಡಿಯಾ ರೆಡಿಯಾಗಿ ನಿಂತಿದೆ ಎಂದೇ ಹೇಳಬಹುದಾಗಿದೆ.

ಒಟ್ಟಿನಲ್ಲಿ 2007ರ ವಿಶ್ವಕಪ್‌ನಲ್ಲಿ ಆದ ಅವಮಾನಕ್ಕೆ 16 ವರ್ಷಗಳ ಬಳಿಕ ರಾಹುಲ್‌ ದ್ರಾವಿಡ್‌ ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧರಿದ್ದಾಗಿದ್ದಾರೆ. ಭಾನುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಬರುವ ಫಲಿತಾಂಶ ರಾಹುಲ್‌ ದ್ರಾವಿಡ್‌ ಕೋಚ್‌ ಆಗಿ ಮುಂದುವರೆಯುತ್ತಾರಾ ಅಥವಾ ಇಲ್ಲವಾ ಎಂಬುದನ್ನೂ ಸಹ ನಿರ್ಧರಿಸಲಿದೆ.

ರಾಹುಲ್‌ ದ್ರಾವಿಡ್‌ ವಿಶ್ವಕಪ್‌ನ ಏಳುಬೀಳುಗಳು
* 1999ರ ವಿಶ್ವಕಪ್‌ ಟೂರ್ನಿಯಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರ
* 2003ರ ವಿಶ್ವಕಪ್‌ ಟೂರ್ನಿಯಲ್ಲಿ ತಂಡದ ಉಪನಾಯಕನಾಗಿ ಫೈನಲ್‌ ಪಂದ್ಯದಲ್ಲಿ ಸೋತಿದ್ದ ರಾಹುಲ್‌ ದ್ರಾವಿಡ್‌
* 2007ರ ವಿಶ್ವಕಪ್‌ನಲ್ಲಿ ನಾಯಕನಾಗಿ ಲೀಗ್‌ ಹಂತದಲ್ಲಿಯೇ ಹೊರಬೀಳುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದ ದ್ರಾವಿಡ್‌
* ಈ ಬಾರಿಯ ವಿಶ್ವಕಪ್‌ನಲ್ಲಿ ಕೋಚ್‌ ಆಗಿ ತಂಡವನ್ನು ಫೈನಲ್‌ ತಲುಪಿಸಿದ ಸಾಧನೆ. 

andolana

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

5 hours ago