ಕ್ರೀಡೆ

ವಿಶ್ವಕಪ್‌ ಸೆಮಿಫೈನಲ್:‌ ಅತ್ಯುತ್ತಮ ಆಡವಾಡುತ್ತಿದ್ದಾಗಲೇ ಮೈದಾನದಿಂದ ಹೊರನಡೆದ ಗಿಲ್‌

ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದೆ. ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಟೀಮ್‌ ಇಂಡಿಯಾ ಪರ ಆರಂಭಿಕರಾಗಿ ನಾಯಕ ರೋಹಿತ್‌ ಶರ್ಮಾ ಹಾಗೂ ಶುಬ್‌ಮನ್‌ ಗಿಲ್‌ ಕಣಕ್ಕಿಳಿದಿದ್ದರು.

ಈ ಜೋಡಿ ಅಬ್ಬರದ ಆಟವನ್ನು ಆಡುವ ಮೂಲಕ ಭಾರತ ತಂಡ ಉತ್ತಮ ಓಪನಿಂಗ್‌ ಪಡೆದುಕೊಂಡಿದ್ದು, ರೋಹಿತ್‌ ಶರ್ಮಾ 29 ಎಸೆತಗಳಲ್ಲಿ 45 ರನ್‌ ಗಳಿಸಿ ಔಟ್‌ ಆದರೆ, ಶುಬ್‌ಮನ್‌ ಗಿಲ್‌ 65 ಎಸೆತಗಳಲ್ಲಿ 79 ರನ್‌ ಕಲೆಹಾಕಿರುವಾಗ ರಿಟೈರ್ಡ್‌ ಹರ್ಟ್‌ ಆಗಿ ಮೈದಾನದಿಂದ ಹೊರನಡೆದಿದ್ದಾರೆ. 

ಮಿಚೆಲ್‌ ಸ್ಯಾಂಟ್ನರ್‌ ಎಸೆದ 23ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ವಿರಾಟ್‌ ಕೊಹ್ಲಿ ಸಿಂಗಲ್‌ ತೆಗೆದುಕೊಂಡರು. ಈ ಸಂದರ್ಭದಲ್ಲಿ ಶುಬ್‌ಮನ್‌ ಗಿಲ್‌ ಸ್ನಾಯು ಸೆಳೆತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಮೈದಾನಕ್ಕೆ ಬಂದ ವೈದ್ಯರು ಗಿಲ್‌ ತಪಾಸಣೆ ನಡೆಸಿ ಆಟ ಮುಂದುವರಿಸುವುದು ಕಷ್ಟ ಎಂದು ತಿಳಿಸಿ ಗಿಲ್‌ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದರು.

ಇನ್ನು ಇಂತಹ ಮಹತ್ವದ ಪಂದ್ಯದಲ್ಲಿ ಗಿಲ್‌ ನೀಡಿದ ಉತ್ತಮ ಪ್ರದರ್ಶನಕ್ಕೆ ಕ್ರಿಕೆಟ್‌ ಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು ಆದಷ್ಟು ಬೇಗ ಗುಣಮುಖರಾಗಿ ಎಂದು ಆಶಿಸಿದ್ದಾರೆ. ಗಿಲ್‌ ಹೊರನಡೆದ ಬಳಿಕ ಶ್ರೇಯಸ್‌ ಅಯ್ಯರ್‌ ಕಣಕ್ಕಿಳಿದಿದ್ದಾರೆ. 

andolana

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

5 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

9 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

10 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

10 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

10 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

11 hours ago