ಕ್ರೀಡೆ

ವಿಶ್ವಕಪ್‌ ಸೆಮಿಫೈನಲ್:‌ ಅತ್ಯುತ್ತಮ ಆಡವಾಡುತ್ತಿದ್ದಾಗಲೇ ಮೈದಾನದಿಂದ ಹೊರನಡೆದ ಗಿಲ್‌

ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದೆ. ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಟೀಮ್‌ ಇಂಡಿಯಾ ಪರ ಆರಂಭಿಕರಾಗಿ ನಾಯಕ ರೋಹಿತ್‌ ಶರ್ಮಾ ಹಾಗೂ ಶುಬ್‌ಮನ್‌ ಗಿಲ್‌ ಕಣಕ್ಕಿಳಿದಿದ್ದರು.

ಈ ಜೋಡಿ ಅಬ್ಬರದ ಆಟವನ್ನು ಆಡುವ ಮೂಲಕ ಭಾರತ ತಂಡ ಉತ್ತಮ ಓಪನಿಂಗ್‌ ಪಡೆದುಕೊಂಡಿದ್ದು, ರೋಹಿತ್‌ ಶರ್ಮಾ 29 ಎಸೆತಗಳಲ್ಲಿ 45 ರನ್‌ ಗಳಿಸಿ ಔಟ್‌ ಆದರೆ, ಶುಬ್‌ಮನ್‌ ಗಿಲ್‌ 65 ಎಸೆತಗಳಲ್ಲಿ 79 ರನ್‌ ಕಲೆಹಾಕಿರುವಾಗ ರಿಟೈರ್ಡ್‌ ಹರ್ಟ್‌ ಆಗಿ ಮೈದಾನದಿಂದ ಹೊರನಡೆದಿದ್ದಾರೆ. 

ಮಿಚೆಲ್‌ ಸ್ಯಾಂಟ್ನರ್‌ ಎಸೆದ 23ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ವಿರಾಟ್‌ ಕೊಹ್ಲಿ ಸಿಂಗಲ್‌ ತೆಗೆದುಕೊಂಡರು. ಈ ಸಂದರ್ಭದಲ್ಲಿ ಶುಬ್‌ಮನ್‌ ಗಿಲ್‌ ಸ್ನಾಯು ಸೆಳೆತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಮೈದಾನಕ್ಕೆ ಬಂದ ವೈದ್ಯರು ಗಿಲ್‌ ತಪಾಸಣೆ ನಡೆಸಿ ಆಟ ಮುಂದುವರಿಸುವುದು ಕಷ್ಟ ಎಂದು ತಿಳಿಸಿ ಗಿಲ್‌ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದರು.

ಇನ್ನು ಇಂತಹ ಮಹತ್ವದ ಪಂದ್ಯದಲ್ಲಿ ಗಿಲ್‌ ನೀಡಿದ ಉತ್ತಮ ಪ್ರದರ್ಶನಕ್ಕೆ ಕ್ರಿಕೆಟ್‌ ಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು ಆದಷ್ಟು ಬೇಗ ಗುಣಮುಖರಾಗಿ ಎಂದು ಆಶಿಸಿದ್ದಾರೆ. ಗಿಲ್‌ ಹೊರನಡೆದ ಬಳಿಕ ಶ್ರೇಯಸ್‌ ಅಯ್ಯರ್‌ ಕಣಕ್ಕಿಳಿದಿದ್ದಾರೆ. 

andolana

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

3 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

27 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

46 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago