ಕಳೆದ ಅಕ್ಟೋಬರ್ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ನಾಕ್ಔಟ್ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.
ಇನ್ನು ಒಂದನೇ ಸೆಮಿ ಫೈನಲ್ ಪಂದ್ಯ ನವೆಂಬರ್ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್ 16ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್ 19ರ ಭಾನುವಾರದಂದು ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಫೈನಲ್ ಪಂದ್ಯದಲ್ಲಿ ಗೆಲ್ಲಲಿರುವ ತಂಡಕ್ಕೆ ವಿಶ್ವಕಪ್ ಟ್ರೋಫಿ ಜತೆಗೆ ಎಷ್ಟು ಬಹುಮಾನ ದೊರೆಯಲಿದೆ ಹಾಗೂ ಟ್ರೋಫಿ ಕೈ ತಪ್ಪಿಸಲಿರುವ ತಂಡಕ್ಕೆ ಎಷ್ಟು ಹಣ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಲಿರುವ ತಂಡಕ್ಕೆ 4 ಮಿಲಿಯನ್ ಡಾಲರ್ ಬಹುಮಾನ ದೊರೆಯಲಿದೆ. ಅಂದರೆ ಸುಮಾರು 33 ಕೋಟಿ ರೂಪಾಯಿಗಳು ಚಾಂಪಿಯನ್ ತಂಡದ ಕೈ ಸೇರಲಿದೆ. ಇನ್ನುಳಿದಂತೆ ರನ್ನರ್ ಅಪ್ ಆಗುವ ತಂಡಕ್ಕೆ 2 ಮಿಲಿಯನ್ ಡಾಲರ್ ಬಹುಮಾನ ದರ ಲಭಿಸಲಿದೆ. ಅಂದರೆ 16.5 ಕೋಟಿ ರೂಪಾಯಿಗಳು ರನ್ನರ್ ಅಪ್ಗೆ ಸಿಗಲಿದೆ. ಸೆಮಿಫೈನಲ್ನಲ್ಲಿ ಸೋಲುವ ಎರಡು ತಂಡಗಳಿಗೆ 8 ಲಕ್ಷ ಡಾಲರ್ಗಳನ್ನು ಪಡೆದುಕೊಳ್ಳಲಿವೆ. ಲೀಗ್ ಹಂತದಲ್ಲಿಯೇ ಹೊರಬೀಳಲಿರುವ ಆರು ತಂಡಗಳಿಗೆ ತಲಾ 1 ಲಕ್ಷ ಡಾಲರ್ ಲಭಿಸಲಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…