ಕಳೆದ ಅಕ್ಟೋಬರ್ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ನಾಕ್ಔಟ್ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.
ಇನ್ನು ಒಂದನೇ ಸೆಮಿ ಫೈನಲ್ ಪಂದ್ಯ ನವೆಂಬರ್ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್ 16ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್ 19ರ ಭಾನುವಾರದಂದು ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಫೈನಲ್ ಪಂದ್ಯದಲ್ಲಿ ಗೆಲ್ಲಲಿರುವ ತಂಡಕ್ಕೆ ವಿಶ್ವಕಪ್ ಟ್ರೋಫಿ ಜತೆಗೆ ಎಷ್ಟು ಬಹುಮಾನ ದೊರೆಯಲಿದೆ ಹಾಗೂ ಟ್ರೋಫಿ ಕೈ ತಪ್ಪಿಸಲಿರುವ ತಂಡಕ್ಕೆ ಎಷ್ಟು ಹಣ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಲಿರುವ ತಂಡಕ್ಕೆ 4 ಮಿಲಿಯನ್ ಡಾಲರ್ ಬಹುಮಾನ ದೊರೆಯಲಿದೆ. ಅಂದರೆ ಸುಮಾರು 33 ಕೋಟಿ ರೂಪಾಯಿಗಳು ಚಾಂಪಿಯನ್ ತಂಡದ ಕೈ ಸೇರಲಿದೆ. ಇನ್ನುಳಿದಂತೆ ರನ್ನರ್ ಅಪ್ ಆಗುವ ತಂಡಕ್ಕೆ 2 ಮಿಲಿಯನ್ ಡಾಲರ್ ಬಹುಮಾನ ದರ ಲಭಿಸಲಿದೆ. ಅಂದರೆ 16.5 ಕೋಟಿ ರೂಪಾಯಿಗಳು ರನ್ನರ್ ಅಪ್ಗೆ ಸಿಗಲಿದೆ. ಸೆಮಿಫೈನಲ್ನಲ್ಲಿ ಸೋಲುವ ಎರಡು ತಂಡಗಳಿಗೆ 8 ಲಕ್ಷ ಡಾಲರ್ಗಳನ್ನು ಪಡೆದುಕೊಳ್ಳಲಿವೆ. ಲೀಗ್ ಹಂತದಲ್ಲಿಯೇ ಹೊರಬೀಳಲಿರುವ ಆರು ತಂಡಗಳಿಗೆ ತಲಾ 1 ಲಕ್ಷ ಡಾಲರ್ ಲಭಿಸಲಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…