ಕ್ರೀಡೆ

ವಿಶ್ವಕಪ್‌ನಲ್ಲಿ ಗೆಲ್ಲುವ ತಂಡ ಹಾಗೂ ರನ್ನರ್‌ ಅಪ್‌ ತಂಡಕ್ಕೆ ಸಿಗುವ ಹಣವೆಷ್ಟು?

ಕಳೆದ ಅಕ್ಟೋಬರ್‌ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್‌ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ನಾಕ್‌ಔಟ್‌ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.

ಇನ್ನು ಒಂದನೇ ಸೆಮಿ ಫೈನಲ್‌ ಪಂದ್ಯ ನವೆಂಬರ್‌ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್‌ ಇಂಡಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್‌ 16ರಂದು ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್‌ 19ರ ಭಾನುವಾರದಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಫೈನಲ್‌ ಪಂದ್ಯದಲ್ಲಿ ಗೆಲ್ಲಲಿರುವ ತಂಡಕ್ಕೆ ವಿಶ್ವಕಪ್‌ ಟ್ರೋಫಿ ಜತೆಗೆ ಎಷ್ಟು ಬಹುಮಾನ ದೊರೆಯಲಿದೆ ಹಾಗೂ ಟ್ರೋಫಿ ಕೈ ತಪ್ಪಿಸಲಿರುವ ತಂಡಕ್ಕೆ ಎಷ್ಟು ಹಣ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಈ ಬಾರಿಯ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಲಿರುವ ತಂಡಕ್ಕೆ 4 ಮಿಲಿಯನ್‌ ಡಾಲರ್‌ ಬಹುಮಾನ ದೊರೆಯಲಿದೆ. ಅಂದರೆ ಸುಮಾರು 33 ಕೋಟಿ ರೂಪಾಯಿಗಳು ಚಾಂಪಿಯನ್‌ ತಂಡದ ಕೈ ಸೇರಲಿದೆ. ಇನ್ನುಳಿದಂತೆ ರನ್ನರ್‌ ಅಪ್‌ ಆಗುವ ತಂಡಕ್ಕೆ 2 ಮಿಲಿಯನ್‌ ಡಾಲರ್‌ ಬಹುಮಾನ ದರ ಲಭಿಸಲಿದೆ. ಅಂದರೆ 16.5 ಕೋಟಿ ರೂಪಾಯಿಗಳು ರನ್ನರ್‌ ಅಪ್‌ಗೆ ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋಲುವ ಎರಡು ತಂಡಗಳಿಗೆ 8 ಲಕ್ಷ ಡಾಲರ್‌ಗಳನ್ನು ಪಡೆದುಕೊಳ್ಳಲಿವೆ. ಲೀಗ್‌ ಹಂತದಲ್ಲಿಯೇ ಹೊರಬೀಳಲಿರುವ ಆರು ತಂಡಗಳಿಗೆ ತಲಾ 1 ಲಕ್ಷ ಡಾಲರ್‌ ಲಭಿಸಲಿದೆ.

andolana

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago