ಕ್ರೀಡೆ

ವಿಶ್ವಕಪ್‌ನಲ್ಲಿ ಗೆಲ್ಲುವ ತಂಡ ಹಾಗೂ ರನ್ನರ್‌ ಅಪ್‌ ತಂಡಕ್ಕೆ ಸಿಗುವ ಹಣವೆಷ್ಟು?

ಕಳೆದ ಅಕ್ಟೋಬರ್‌ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್‌ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ನಾಕ್‌ಔಟ್‌ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.

ಇನ್ನು ಒಂದನೇ ಸೆಮಿ ಫೈನಲ್‌ ಪಂದ್ಯ ನವೆಂಬರ್‌ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್‌ ಇಂಡಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್‌ 16ರಂದು ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್‌ 19ರ ಭಾನುವಾರದಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಫೈನಲ್‌ ಪಂದ್ಯದಲ್ಲಿ ಗೆಲ್ಲಲಿರುವ ತಂಡಕ್ಕೆ ವಿಶ್ವಕಪ್‌ ಟ್ರೋಫಿ ಜತೆಗೆ ಎಷ್ಟು ಬಹುಮಾನ ದೊರೆಯಲಿದೆ ಹಾಗೂ ಟ್ರೋಫಿ ಕೈ ತಪ್ಪಿಸಲಿರುವ ತಂಡಕ್ಕೆ ಎಷ್ಟು ಹಣ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಈ ಬಾರಿಯ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಲಿರುವ ತಂಡಕ್ಕೆ 4 ಮಿಲಿಯನ್‌ ಡಾಲರ್‌ ಬಹುಮಾನ ದೊರೆಯಲಿದೆ. ಅಂದರೆ ಸುಮಾರು 33 ಕೋಟಿ ರೂಪಾಯಿಗಳು ಚಾಂಪಿಯನ್‌ ತಂಡದ ಕೈ ಸೇರಲಿದೆ. ಇನ್ನುಳಿದಂತೆ ರನ್ನರ್‌ ಅಪ್‌ ಆಗುವ ತಂಡಕ್ಕೆ 2 ಮಿಲಿಯನ್‌ ಡಾಲರ್‌ ಬಹುಮಾನ ದರ ಲಭಿಸಲಿದೆ. ಅಂದರೆ 16.5 ಕೋಟಿ ರೂಪಾಯಿಗಳು ರನ್ನರ್‌ ಅಪ್‌ಗೆ ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋಲುವ ಎರಡು ತಂಡಗಳಿಗೆ 8 ಲಕ್ಷ ಡಾಲರ್‌ಗಳನ್ನು ಪಡೆದುಕೊಳ್ಳಲಿವೆ. ಲೀಗ್‌ ಹಂತದಲ್ಲಿಯೇ ಹೊರಬೀಳಲಿರುವ ಆರು ತಂಡಗಳಿಗೆ ತಲಾ 1 ಲಕ್ಷ ಡಾಲರ್‌ ಲಭಿಸಲಿದೆ.

andolana

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

3 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

4 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

5 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

5 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

6 hours ago