ಕಳೆದ ಅಕ್ಟೋಬರ್ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ನಾಕ್ಔಟ್ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.
ಇನ್ನು ಒಂದನೇ ಸೆಮಿ ಫೈನಲ್ ಪಂದ್ಯ ನವೆಂಬರ್ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್ 16ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್ 19ರ ಭಾನುವಾರದಂದು ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಫೈನಲ್ ಪಂದ್ಯದಲ್ಲಿ ಗೆಲ್ಲಲಿರುವ ತಂಡಕ್ಕೆ ವಿಶ್ವಕಪ್ ಟ್ರೋಫಿ ಜತೆಗೆ ಎಷ್ಟು ಬಹುಮಾನ ದೊರೆಯಲಿದೆ ಹಾಗೂ ಟ್ರೋಫಿ ಕೈ ತಪ್ಪಿಸಲಿರುವ ತಂಡಕ್ಕೆ ಎಷ್ಟು ಹಣ ಸಿಗಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಲಿರುವ ತಂಡಕ್ಕೆ 4 ಮಿಲಿಯನ್ ಡಾಲರ್ ಬಹುಮಾನ ದೊರೆಯಲಿದೆ. ಅಂದರೆ ಸುಮಾರು 33 ಕೋಟಿ ರೂಪಾಯಿಗಳು ಚಾಂಪಿಯನ್ ತಂಡದ ಕೈ ಸೇರಲಿದೆ. ಇನ್ನುಳಿದಂತೆ ರನ್ನರ್ ಅಪ್ ಆಗುವ ತಂಡಕ್ಕೆ 2 ಮಿಲಿಯನ್ ಡಾಲರ್ ಬಹುಮಾನ ದರ ಲಭಿಸಲಿದೆ. ಅಂದರೆ 16.5 ಕೋಟಿ ರೂಪಾಯಿಗಳು ರನ್ನರ್ ಅಪ್ಗೆ ಸಿಗಲಿದೆ. ಸೆಮಿಫೈನಲ್ನಲ್ಲಿ ಸೋಲುವ ಎರಡು ತಂಡಗಳಿಗೆ 8 ಲಕ್ಷ ಡಾಲರ್ಗಳನ್ನು ಪಡೆದುಕೊಳ್ಳಲಿವೆ. ಲೀಗ್ ಹಂತದಲ್ಲಿಯೇ ಹೊರಬೀಳಲಿರುವ ಆರು ತಂಡಗಳಿಗೆ ತಲಾ 1 ಲಕ್ಷ ಡಾಲರ್ ಲಭಿಸಲಿದೆ.
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…