ಕ್ರೀಡೆ

ವಿಶ್ವಕಪ್ 2025 | ಶಫಾಲಿ ಅರ್ಧಶತಕ ; ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ.

ಇವರಿಬ್ಬರು ಮೊದಲ ವಿಕೆಟ್​ಗೆ 104 ರನ್​ಗಳ ಜೊತೆಯಾಟ ನಡೆಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಆದಾಗ್ಯೂ ಅರ್ಧಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ 45 ರನ್ ಬಾರಿಸಿ ಔಟಾದರೆ, ಶಫಾಲಿ ವರ್ಮಾ ಅರ್ಧಶತಕ ಬಾರಿಸಿ ಮುನ್ನಡೆಯುತ್ತಿದ್ದಾರೆ.

ಇದನ್ನು ಓದಿ: ಟಿ.20 ಕ್ರಿಕೆಟ್‌ಗೆ ಕೇನ್‌ ವಿಲಿಯಮ್ಸನ್‌ ವಿದಾಯ

49 ಎಸೆತಗಳಲ್ಲಿ ಅರ್ಧಶತಕ
ಪ್ರತೀಕಾ ರಾವಲ್ ಅವರ ಇಂಜುರಿಯಿಂದಾಗಿ ಭಾರತ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಶಫಾಲಿ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಫಾರ್ಮ್​ ಕಂಡುಕೊಂಡಿರುವ ಶಫಾಲಿ 49 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಮೂರು ವರ್ಷಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ ಶೆಫಾಲಿ 50 ರನ್‌ಗಳ ಗಡಿ ದಾಟಿರುವುದು ಇನ್ನಷ್ಟು ವಿಶೇಷವಾಗಿದೆ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago